ಬೆಂಗಳೂರು: ಆರ್ಎಸ್ಎಸ್ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ರಾಜ್ಯ ಸರ್ಕಾರ ತಡೆ ನೀಡುವ ಮೂಲಕ ಶಾಕ್ ನೀಡಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಜನಸೇವಾ ಟ್ರಸ್ಟ್ ಗೆ ಮಂಜೂರಾಗಿದ್ದ 35.33 ಎಕರೆ ಭೂಮಿ ಹಸಾಂತರಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ತಾವರೆಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಇದನ್ನು ತಡೆ ಹಿಡಿದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ, ಜನಸೇವಾ ವಿದ್ಯಾಕೇಂದ್ರ ನ್ಯಾಯಬದ್ಧವಗೈ ಕೆಲಸ ಆಡುತ್ತಿದೆ. ನಾನೂ ಕೂಡ ಜನಸೇವಾ ವಿದ್ಯಾಕೇಂದ್ರದಲ್ಲಿ ಶಿಕ್ಷಣ ಪಡೆದವನು. ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಈಗ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರದ ಯೋಜನೆಗಳಿಗೂ ತಡೆ ಹಿಡಿದಿರುವುದಲ್ಲದೇ ಮಂಜೂರಾಗಿರುವ ಭೂಮಿ ಹಸ್ತಾಂತರಕ್ಕೂ ತಡೆ ನೀಡಿದೆ. ಈ ಸರ್ಕಾರ ಯಾವ ಹಾದಿಯಲ್ಲಿ ಸಾಗುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…