BREAKING NEWS

14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು ಸುಧಾರಣೆಗಳನ್ನು ಮಾಡಲು ಮುಂದಾಗಿರುವ ಸರ್ಕಾರ ಐಎಎಸ್‌ ಹಾಗೂ ಐಪಿಎಸ್ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡುತ್ತಿದೆ. ಈ ಸಂಬಂಧ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಅವುಗಳ ವಿವರ ಇಲ್ಲಿದೆ.

ವರ್ಗಾವಣೆಗೊಂಡಿರುವ ಅಧಿಕಾರಿಗಳು
ಜಾವೇದ್ ಅಖ್ತರ್: ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
ಬಿ.ಸಿ.ಸತೀಶ್: ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಡಾ.ಹೆಚ್.ಎನ್.ಗೋಪಾಲಕೃಷ್ಣ: ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
ಡಾ.ಎನ್.ಶಿವಶಂಕರ: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಅಕ್ರಂ ಪಾಷಾ: ಜಿಲ್ಲಾಧಿಕಾರಿ, ಕೋಲಾರ
ಗಂಗೂಬಾಯಿ ರಮೇಶ್ ಮಾನಕರ್: ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
ಆರ್‌.ಲತಾ: ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
ವೆಂಕಟರಾಜು: ಜಿಲ್ಲಾಧಿಕಾರಿ, ಕೊಡಗು
ಫೌಝಿಯಾ ತರನುಮ್: ಜಿಲ್ಲಾಧಿಕಾರಿ, ಕಲಬುರಗಿ
ಎನ್.ಎಂ.ನಾಗರಾಜ್: ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಭನ್ವರ್ ಸಿಂಗ್ ಮೀನಾ: ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
ಜಿ.ಲಿಂಗಮೂರ್ತಿ: ವ್ಯವಸ್ಥಾಪಕ ನಿರ್ದೇಶಕ, ಕೆಆರ್​ಡಿಸಿಎಲ್
ಡಾ.ಗಿರೀಶ್ ದಿಲೀಪ್ ಬಾಡೊಲೆ: ಪರೀಕ್ಷಾ ನಿಯಂತ್ರಕ, ಕೆಪಿಎಸ್​ಸಿ
ನೊಂಗ್ಜಾಯ್ ಮೊಹಮ್ಮದ್ ಅಲಿ‌ ಅಕ್ರಂ ಶಾ: ಆಯುಕ್ತ, ಹಂಪಿ‌ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ

andolanait

Recent Posts

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

59 mins ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

1 hour ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

1 hour ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

2 hours ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

4 hours ago