ಹೊಸದಿಲ್ಲಿ : ಭಾರತೀಯ ಸೇನಾಪಡೆಗಳಲ್ಲಿ ಅಲ್ಪಾವಧಿಗೆ ಸೇವೆ ಸಲ್ಲಿಸಲು ಯುವಕರಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ‘ಅಗ್ನಿಪಥ’ ಯೋಜನೆಯ ಪರವಾಗಿ ದಿಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಫೆ 27 ರಂದು ದಿಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಗೋಪಾಲ್ ಕೃಷ್ಣ ಮತ್ತು ವಕೀಲ ಎಂ.ಎಲ್. ಶರ್ಮಾ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂಕೋರ್ಟ್ ಪುರಸ್ಕರಿಸಲು ನಿರಾಕರಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾ ಪಿಎಸ್ ನರಸಿಂಹ ಹಾಗೂ ನ್ಯಾ ಜೆಬಿ ಪರ್ದಿವಾಲಾ ಅವರಿದ್ದ ಪೀಠ, ”ಕ್ಷಮಿಸಿ, ನಾವು ಹೈಕೋರ್ಟ್ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಈ ವಿಷಯದಲ್ಲಿ ಹೈಕೋರ್ಟ್ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ತೀರ್ಪು ನೀಡಿದೆ,”ಎಂದು ಹೇಳಿದೆ.
ಆದಾಗ್ಯೂ, ಅಗ್ನಿಪಥ ಯೋಜನೆಯನ್ನು ಪ್ರಾರಂಭಿಸುವ ಮೊದಲು ಭಾರತೀಯ ವಾಯು ಪಡೆಯಲ್ಲಿ (ಐಎಎಫ್) ನೇಮಕಾತಿ ಕುರಿತು ಪ್ರಶ್ನಿಸಲಾದ ಅರ್ಜಿಯನ್ನು ಏ 17 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಅರ್ಜಿದಾರರಿಗೆ ತಿಳಿಸಿದೆ. ಭಾರತೀಯ ವಾಯುಪಡೆಯಲ್ಲಿ ನೇಮಕಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಸೂಕ್ತ ಉತ್ತರ ನೀಡುವಂತೆ ನ್ಯಾಯಪೀಠವು ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಅಗ್ನಿಪಥ ಯೋಜನೆ ಘೋಷಣೆಗೂ ಮುನ್ನ ಸೇನಾ ನೇಮಕಾತಿ ರಾಲಿಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗ್ನಿವೀರರಾಗಲು ಹಕ್ಕು ಇರುತ್ತದೆ. ಇದಕ್ಕೆ ಕೇಂದ್ರ ಸರಕಾರ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾದ ಅರ್ಜಿಗಳಲ್ಲಿ ಒತ್ತಾಯಿಸಲಾಗಿತ್ತು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…