ನವದೆಹಲಿ : ತನ್ನ 26 ವಾರದ ಗರ್ಭವನ್ನು ತೆಗೆದುಹಾಕಲು ಅನುಮತಿ ಕೋರಿ ವಿವಾಹಿತ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕಿರಿಸಿದೆ. ಮಹಿಳೆಯ ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿಗೆ ಯಾವ ದೋಷವೂ ಇಲ್ಲ ಎಂದು ಏಮ್ಸ್ ತಜ್ಞ ವೈದ್ಯರ ವರದಿಯನ್ನಾಧರಿಸಿ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ.
“ಅರ್ಜಿದಾರೆ ಗರ್ಭ ಧರಿಸಿ 26 ವಾರಗಳು ಮತ್ತು 5 ದಿನಗಳಾಗಿವೆ. ತಾಯಿ ಮತ್ತು ಗರ್ಭದಲ್ಲಿರುವ ಭ್ರೂಣಕ್ಕೆ ಯಾವುದೇ ಅಪಾಯವಿಲ್ಲದೇ ಇರುವುದರಿಂದ ಈ ಹಂತದಲ್ಲಿ ಗರ್ಭವನ್ನು ತೆಗೆಯಲು ಅನುಮತಿ ನೀಡುವುದು ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೆನ್ಸಿ ಕಾಯಿದೆಯ ಸೆಕ್ಷನ್ 3 ಮತ್ತು 5ರ ಉಲ್ಲಂಘನೆಯಾಗುತ್ತದೆ,” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದರು.
“ನಾವು ಹೃದಯ ಬಡಿತವನ್ನು ನಿಲ್ಲಿಸುವ ಹಾಗಿಲ್ಲ,” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹೇಳಿದರು.
ಅರ್ಜಿದಾರೆ ಈಗಾಗಲೇ ಎರಡು ಮಕ್ಕಳ ತಾಯಿಯಾಗಿದ್ದಾರೆ. ತಾನು ಖಿನ್ನತೆಯಿಂದ ಬಳಲುತ್ತಿದ್ದು ಮೂರನೇ ಮಗುವಿನ ಆರೈಕೆ ತನ್ನಿಂದ ಭಾವಾತ್ಮಕವಾಗಿ ಹಾಗೂ ಆರ್ಥಿಕವಾಗಿ ಸಾಧ್ಯವಿಲ್ಲ,” ಎಂದು ಹೇಳಿದ್ದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…