BREAKING NEWS

ಮೂರು ದಿನಗಳ ಕಾಲ ನಡೆದ ಜಿ-20 ಶೆರ್ಪಾ ಸಭೆ ಮುಕ್ತಾಯ

ಹಂಪಿ : ಭಾರತೀಯ ನಿಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಅಧ್ಯಕ್ಷತೆಯಲ್ಲಿ ಪಾರಂಪರಿಕ ತಾಣ ಹಂಪಿಯಲ್ಲಿ ನಡೆದ ಜಿ20 ಶೆರ್ಪಾ ಮೂರನೇ ಸಭೆ ನೆನ್ನೆ ಮುಕ್ತಾಯಗೊಂಡಿದೆ. ಜಿ-20 ದೇಶಗಳ 120 ಕ್ಕೂ ಹೆಚ್ಚು ಪ್ರತಿನಿಧಿಗಳು, ಆಹ್ವಾನಿತ ದೇಶಗಳು ಮತ್ತು ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು ಜಂಟಿಯಾಗಿ ‘ಲೀಡರ್ಸ್ ಡಿಕ್ಲರೇಶನ್’ ಕರಡು ರಚನೆಗೆ ಭಾಗವಹಿಸಿದ್ದರು.

ಒಂದು ಜಗತ್ತು, ಒಂದು ಕುಟುಂಬ ಪರಿಕಲ್ಪನೆಯಡಿ ಪರಿವರ್ತಕ, ಕ್ರಿಯಾ-ಆಧಾರಿತ ಉಪಕ್ರಮಗಳನ್ನು ಪೋಷಿಸುವ ಗುರಿಯೊಂದಿಗೆ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಲಾಯಿತು. ಶೆರ್ಪಾಗಳು ಮತ್ತು ನಿಯೋಗಗಳ ಮುಖ್ಯಸ್ಥರು ನಾಯಕರ ಘೋಷಣೆಯ ಕರಡು ರಚನೆಯಲ್ಲಿ ಕಾರ್ಯ ನಿರ್ವಹಿಸಿದರು. ಇದು ನಿರ್ಣಾಯಕ ಜಾಗತಿಕ ಸಮಸ್ಯೆಗಳ ಮೇಲೆ ಪ್ರಗತಿಯನ್ನು ಹೆಚ್ಚಿಸಲು ಜಿ-20 ರಾಷ್ಟ್ರಗಳ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಮತ್ತು ಸಮರ್ಥನೀಯ ಅಭಿವೃದ್ಧಿಗೆ ಆದ್ಯತೆ ಮತ್ತು ಸವಾಲುಗಳನ್ನು ನಿಭಾಯಿಸಲು ಬದ್ಧವಾಗಿದೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂತ್, ಕರಡು ಪಠ್ಯವು ಸುಸ್ಥಿರ ಅಭಿವೃದ್ಧಿ ಗುರಿಗಳು, ಹಸಿರು ಅಭಿವೃದ್ಧಿ, ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ ಸುಧಾರಣೆಗಳು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಲಿಂಗ ಸಮಾನತೆ ಸೇರಿದಂತೆ ಆರು ಆದ್ಯತೆಗಳು ಮತ್ತು ವಿವಿಧ ಕಾರ್ಯ ಗುಂಪುಗಳ ಫಲಿತಾಂಶಗಳನ್ನು ಒಳಗೊಂಡಿದೆ ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago