BREAKING NEWS

ಮೂರು ದಿನಗಳ ಕಾಲ ನಡೆದ ಜಿ-20 ಶೆರ್ಪಾ ಸಭೆ ಮುಕ್ತಾಯ

ಹಂಪಿ : ಭಾರತೀಯ ನಿಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಅಧ್ಯಕ್ಷತೆಯಲ್ಲಿ ಪಾರಂಪರಿಕ ತಾಣ ಹಂಪಿಯಲ್ಲಿ ನಡೆದ ಜಿ20 ಶೆರ್ಪಾ ಮೂರನೇ ಸಭೆ ನೆನ್ನೆ ಮುಕ್ತಾಯಗೊಂಡಿದೆ. ಜಿ-20 ದೇಶಗಳ 120 ಕ್ಕೂ ಹೆಚ್ಚು ಪ್ರತಿನಿಧಿಗಳು, ಆಹ್ವಾನಿತ ದೇಶಗಳು ಮತ್ತು ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು ಜಂಟಿಯಾಗಿ ‘ಲೀಡರ್ಸ್ ಡಿಕ್ಲರೇಶನ್’ ಕರಡು ರಚನೆಗೆ ಭಾಗವಹಿಸಿದ್ದರು.

ಒಂದು ಜಗತ್ತು, ಒಂದು ಕುಟುಂಬ ಪರಿಕಲ್ಪನೆಯಡಿ ಪರಿವರ್ತಕ, ಕ್ರಿಯಾ-ಆಧಾರಿತ ಉಪಕ್ರಮಗಳನ್ನು ಪೋಷಿಸುವ ಗುರಿಯೊಂದಿಗೆ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಲಾಯಿತು. ಶೆರ್ಪಾಗಳು ಮತ್ತು ನಿಯೋಗಗಳ ಮುಖ್ಯಸ್ಥರು ನಾಯಕರ ಘೋಷಣೆಯ ಕರಡು ರಚನೆಯಲ್ಲಿ ಕಾರ್ಯ ನಿರ್ವಹಿಸಿದರು. ಇದು ನಿರ್ಣಾಯಕ ಜಾಗತಿಕ ಸಮಸ್ಯೆಗಳ ಮೇಲೆ ಪ್ರಗತಿಯನ್ನು ಹೆಚ್ಚಿಸಲು ಜಿ-20 ರಾಷ್ಟ್ರಗಳ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಮತ್ತು ಸಮರ್ಥನೀಯ ಅಭಿವೃದ್ಧಿಗೆ ಆದ್ಯತೆ ಮತ್ತು ಸವಾಲುಗಳನ್ನು ನಿಭಾಯಿಸಲು ಬದ್ಧವಾಗಿದೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂತ್, ಕರಡು ಪಠ್ಯವು ಸುಸ್ಥಿರ ಅಭಿವೃದ್ಧಿ ಗುರಿಗಳು, ಹಸಿರು ಅಭಿವೃದ್ಧಿ, ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ ಸುಧಾರಣೆಗಳು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಲಿಂಗ ಸಮಾನತೆ ಸೇರಿದಂತೆ ಆರು ಆದ್ಯತೆಗಳು ಮತ್ತು ವಿವಿಧ ಕಾರ್ಯ ಗುಂಪುಗಳ ಫಲಿತಾಂಶಗಳನ್ನು ಒಳಗೊಂಡಿದೆ ಎಂದು ಹೇಳಿದರು.

lokesh

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

32 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago