ನವದೆಹಲಿ : ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ ಆಟಗಾರರಿಗೆ ದೊಡ್ಡ ಹೊಡೆತ ಎಂದೇ ಹೇಳಬಹುದು, ವಾಸ್ತವವಾಗಿ, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮೇ 30 ರಂದು ಭಾರತೀಯ ಕುಸ್ತಿ ಫೆಡರೇಶನ್ಗೆ ಪತ್ರ ಬರೆದಿತ್ತು,.
ಮುಂದಿನ 45 ದಿನಗಳಲ್ಲಿ ಭಾರತದ ಕುಸ್ತಿ ಫೆಡರೇಶನ್ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು, ಮಹಿಳಾ ಕುಸ್ತಿಪಟುಗಳು ಹಿಂದಿನ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದವು. ಬಳಿಕ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ ಜುಲೈ 11 ರಂದು ನಡೆಯಬೇಕಿತ್ತು.
ಅಸ್ಸಾಂ ಕುಸ್ತಿ ಫೆಡರೇಷನ್ ಅದರ ಮಾನ್ಯತೆಗೆ ಸಂಬಂಧಿಸಿದಂತೆ ಅಸ್ಸಾಂ ಹೈಕೋರ್ಟ್ನಿಂದ ಚುನಾವಣೆಗೆ ತಡೆಯಾಜ್ಞೆ ತಂದಿತ್ತು. ಈ ವಿಚಾರದ ಬಳಿಕ ಚುನಾವಣಾಧಿಕಾರಿ ಆಗಸ್ಟ್ 12ಎಂದು ಭಾರತೀಯ ಕುಸ್ತಿ ಫೆಡರೇಷನ್ಗೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿದ್ದರು. ಆದರೆ ಆಗಸ್ಟ್ 11ರಂದು ಹರ್ಯಾಣ ಹೈಕೋರ್ಟ್ ಚುನಾವಣೆಗೆ ತಡೆ ನೀಡಿತ್ತು. ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…