ನವದೆಹಲಿ : ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ ಆಟಗಾರರಿಗೆ ದೊಡ್ಡ ಹೊಡೆತ ಎಂದೇ ಹೇಳಬಹುದು, ವಾಸ್ತವವಾಗಿ, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮೇ 30 ರಂದು ಭಾರತೀಯ ಕುಸ್ತಿ ಫೆಡರೇಶನ್ಗೆ ಪತ್ರ ಬರೆದಿತ್ತು,.
ಮುಂದಿನ 45 ದಿನಗಳಲ್ಲಿ ಭಾರತದ ಕುಸ್ತಿ ಫೆಡರೇಶನ್ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು, ಮಹಿಳಾ ಕುಸ್ತಿಪಟುಗಳು ಹಿಂದಿನ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದವು. ಬಳಿಕ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ ಜುಲೈ 11 ರಂದು ನಡೆಯಬೇಕಿತ್ತು.
ಅಸ್ಸಾಂ ಕುಸ್ತಿ ಫೆಡರೇಷನ್ ಅದರ ಮಾನ್ಯತೆಗೆ ಸಂಬಂಧಿಸಿದಂತೆ ಅಸ್ಸಾಂ ಹೈಕೋರ್ಟ್ನಿಂದ ಚುನಾವಣೆಗೆ ತಡೆಯಾಜ್ಞೆ ತಂದಿತ್ತು. ಈ ವಿಚಾರದ ಬಳಿಕ ಚುನಾವಣಾಧಿಕಾರಿ ಆಗಸ್ಟ್ 12ಎಂದು ಭಾರತೀಯ ಕುಸ್ತಿ ಫೆಡರೇಷನ್ಗೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿದ್ದರು. ಆದರೆ ಆಗಸ್ಟ್ 11ರಂದು ಹರ್ಯಾಣ ಹೈಕೋರ್ಟ್ ಚುನಾವಣೆಗೆ ತಡೆ ನೀಡಿತ್ತು. ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…