BREAKING NEWS

ಭಾರತೀಯ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆ

ನವದೆಹಲಿ : ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ ಆಟಗಾರರಿಗೆ ದೊಡ್ಡ ಹೊಡೆತ ಎಂದೇ ಹೇಳಬಹುದು, ವಾಸ್ತವವಾಗಿ, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮೇ 30 ರಂದು ಭಾರತೀಯ ಕುಸ್ತಿ ಫೆಡರೇಶನ್‌ಗೆ ಪತ್ರ ಬರೆದಿತ್ತು,.

ಮುಂದಿನ 45 ದಿನಗಳಲ್ಲಿ ಭಾರತದ ಕುಸ್ತಿ ಫೆಡರೇಶನ್​ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು, ಮಹಿಳಾ ಕುಸ್ತಿಪಟುಗಳು ಹಿಂದಿನ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದವು. ಬಳಿಕ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ ಜುಲೈ 11 ರಂದು ನಡೆಯಬೇಕಿತ್ತು.

ಅಸ್ಸಾಂ ಕುಸ್ತಿ ಫೆಡರೇಷನ್ ಅದರ ಮಾನ್ಯತೆಗೆ ಸಂಬಂಧಿಸಿದಂತೆ ಅಸ್ಸಾಂ ಹೈಕೋರ್ಟ್​ನಿಂದ ಚುನಾವಣೆಗೆ ತಡೆಯಾಜ್ಞೆ ತಂದಿತ್ತು. ಈ ವಿಚಾರದ ಬಳಿಕ ಚುನಾವಣಾಧಿಕಾರಿ ಆಗಸ್ಟ್​ 12ಎಂದು ಭಾರತೀಯ ಕುಸ್ತಿ ಫೆಡರೇಷನ್​ಗೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿದ್ದರು. ಆದರೆ ಆಗಸ್ಟ್​ 11ರಂದು ಹರ್ಯಾಣ ಹೈಕೋರ್ಟ್​ ಚುನಾವಣೆಗೆ ತಡೆ ನೀಡಿತ್ತು. ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.

lokesh

Recent Posts

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

24 mins ago

ಬೆಳೆ ವಿಮೆ ಪರಿಹಾರ ಸುಧಾರಣೆ : ಅದೇ ಹಂಗಾಮಿನಲ್ಲೇ ವಿತರಣೆಗೆ ಕ್ರಮ ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…

53 mins ago

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

2 hours ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

2 hours ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

2 hours ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

3 hours ago