BREAKING NEWS

ಭಾರತೀಯ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆ

ನವದೆಹಲಿ : ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ ಆಟಗಾರರಿಗೆ ದೊಡ್ಡ ಹೊಡೆತ ಎಂದೇ ಹೇಳಬಹುದು, ವಾಸ್ತವವಾಗಿ, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮೇ 30 ರಂದು ಭಾರತೀಯ ಕುಸ್ತಿ ಫೆಡರೇಶನ್‌ಗೆ ಪತ್ರ ಬರೆದಿತ್ತು,.

ಮುಂದಿನ 45 ದಿನಗಳಲ್ಲಿ ಭಾರತದ ಕುಸ್ತಿ ಫೆಡರೇಶನ್​ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು, ಮಹಿಳಾ ಕುಸ್ತಿಪಟುಗಳು ಹಿಂದಿನ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದವು. ಬಳಿಕ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ ಜುಲೈ 11 ರಂದು ನಡೆಯಬೇಕಿತ್ತು.

ಅಸ್ಸಾಂ ಕುಸ್ತಿ ಫೆಡರೇಷನ್ ಅದರ ಮಾನ್ಯತೆಗೆ ಸಂಬಂಧಿಸಿದಂತೆ ಅಸ್ಸಾಂ ಹೈಕೋರ್ಟ್​ನಿಂದ ಚುನಾವಣೆಗೆ ತಡೆಯಾಜ್ಞೆ ತಂದಿತ್ತು. ಈ ವಿಚಾರದ ಬಳಿಕ ಚುನಾವಣಾಧಿಕಾರಿ ಆಗಸ್ಟ್​ 12ಎಂದು ಭಾರತೀಯ ಕುಸ್ತಿ ಫೆಡರೇಷನ್​ಗೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿದ್ದರು. ಆದರೆ ಆಗಸ್ಟ್​ 11ರಂದು ಹರ್ಯಾಣ ಹೈಕೋರ್ಟ್​ ಚುನಾವಣೆಗೆ ತಡೆ ನೀಡಿತ್ತು. ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

31 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago