BREAKING NEWS

ಡಾ ಸತೀಶ್‌ ಮೇಲೆ ದೂರುಗಳಿವೆ, ಭ್ರೂಣ ಹತ್ಯೆ ಪ್ರಕರಣದಲ್ಲಿ ನಮ್ಮ ಇಲಾಖೆಯ ಹಲವರು ಶಾಮೀಲಾಗಿದ್ದಾರೆ: ದಿನೇಶ್‌ ಗುಂಡೂರಾವ್‌

ಕಳೆದ ಕೆಲ ದಿನಗಳಿಂದ ಹೆಚ್ಚು ಸುದ್ದಿಗೊಳಗಾಗುತ್ತಿರುವ ಪ್ರಕರಣವೆಂದರೆ ಅದು ಭ್ರೂಣ ಹತ್ಯೆ ಜಾಲವೊಂದು ಪೊಲೀಸರಿಗೆ ಸಿಕ್ಕಿ ಬಿದ್ದಿರುವುದು. ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಅಪರಾಧವನ್ನು ಎಸಗಿದ್ದ 9 ಜನರ ಗ್ಯಾಂಗ್‌ ಒಂದನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ವರ್ಷಗಳಲ್ಲಿ 900ಕ್ಕೂ ಹೆಚ್ಚು ಭ್ರೂಣಗಳನ್ನು ಈ ತಂಡ ಹತ್ಯೆ ಮಾಡಿತ್ತು ಎಂಬ ಆಘಾತಕಾರಿ ಸುದ್ದಿ ಸಹ ಹೊರಬಿದ್ದಿತ್ತು.

ಇಷ್ಟು ದೊಡ್ಡ ಮಟ್ಟದ ಹಗರಣವೊಂದು ಹೊರಬಿದ್ದ ಬೆನ್ನಲ್ಲೇ ಕುಶಾಲನಗರ ಸಮೀಪ ನಿನ್ನೆ ( ಡಿಸೆಂಬರ್‌ 1 ) ಡಾ ಸತೀಶ್‌ ಎಂಬ ಆಯುಷ್‌ ವೈದ್ಯರೊಬ್ಬರು ತಮ್ಮದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಎಡಗೈಗೆ ಸಿರಿಂಜ್‌ ಚುಚ್ಚಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದರಿಂದ ಇದು ಆತ್ಮಹತ್ಯೆ ಎಂಬ ಅನುಮಾನಗಳು ವ್ಯಕ್ತವಾಗಿದ್ದವು.

ಪಾಂಡವಪುರದ ಶಿವಳ್ಳಿಯಲ್ಲಿ ಆಲೋಪತಿ ಪ್ರಾಕ್ಟಿಸ್‌ ಮಾಡುತ್ತಿದ್ದ ಸತೀಶ್‌ಗೂ ಈ ಭ್ರೂಣ ಹತ್ಯೆಗೂ ಸಂಬಂಧವಿದೆ ಎಂದು ಅಲ್ಲಿನ ಸ್ಥಳೀಯರು ಸ್ಥಳ ಪರಿಶೀಲನೆಗೆ ಬಂದಿದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಮಾಹಿತಿಯನ್ನು ನೀಡಿದ್ದರು. ಇದನ್ನು ಆಲಿಸಿದ ಸಚಿವರು ಅವರನ್ನೂ ವಿಚಾರಿಸಿ ಎಂದು ಸೂಚನೆ ನೀಡಿದ್ದರು.

ಹೀಗೆ ಭ್ರೂಣ ಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಕಾರಣ ಸತೀಶ್‌ ಆತ್ಮಹತ್ಯೆ ಮಾಡಿಕೊಂಡಿಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇದೀಗ ಸ್ವತಃ ದಿನೇಶ್‌ ಗುಂಡೂರಾವ್‌ ಅವರೇ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ನಾನು ಎಲ್ಲಾ ಕಡೆ ಭೇಟಿ ಕೊಟ್ಟು ಜನಗಳ ಜತೆ ಮಾತನಾಡಿ ಮಾಹಿತಿಯನ್ನು ಕಲೆಹಾಕಿದ್ದೆ. ಇದು ವಿವಿಧ ಜಿಲ್ಲೆಗಳ ಪ್ರಕರಣವಾಗಿರುವ ಕಾರಣ ಕೇವಲ ಬೆಂಗಳೂರು ಪೊಲೀಸರು ತನಿಖೆ ನಡೆಸಿದರೆ ಆಗುವುದಿಲ್ಲ, ಇದನ್ನು ಸಿಐಡಿಗೆ ವಹಿಸಬೇಕು ಎಂದು ಸಿಎಂ ಅವರಿಗೆ ಮನವಿ ಮಾಡಿದ್ದೆ, ಅವರೂ ಸಹ ಸಮ್ಮತಿಸಿದ್ರು. ನಮ್ಮ ಇಲಾಖೆಯ ಯಾರಲ್ಲಿ ಲೋಪ ಕಂಡುಬಂದಿದೆಯೋ ಅಂತಹ ಇಬ್ಬರನ್ನು ಈಗಾಗಲೇ ಸಸ್ಪೆಂಡ್‌ ಮಾಡಿದ್ದೇವೆ. ಇನ್ನು ಉಳಿದಿರುವ ಮಾಹಿತಿ ಬಂತು. ಈ ಸತೀಶ್‌ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಮಾಹಿತಿಯೂ ನಮಗೆ ಬಂತು. ಆದರೆ ನಾವು ಅದರ ಬಗ್ಗೆ ತನಿಖೆ ನಡೆಸಬೇಕಾದ ಸನ್ನಿವೇಶವಿತ್ತು. ಈಗ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ನನಗೆ ಗೊತ್ತಿಲ್ಲ. ಇವರಿಗೂ ಭ್ರೂಣ ಹತ್ಯೆಗೂ ಲಿಂಕ್‌ ಇದೆಯಾ ಎಂಬುದನ್ನು ನೋಡಬೇಕಿದೆ. ನಮ್ಮ ಇಲಾಖೆಯ ಕೆಲವು ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಅನ್ನೋ ಮಾಹಿತಿ ಇದೆ. ಸತೀಶ್‌ ಸಹ ನಮ್ಮ ಆಯುಷ್‌ ಅಧಿಕಾರಿ. ಅವರ ಬಗ್ಗೆನೂ ಹೇಳಿದ್ರು. ಅವರು ಪಿರಿಯಾಪಟ್ಟಣದಲ್ಲಿ ಆಯುಷ್‌ ಅಧಿಕಾರಿಯಾಗಿದ್ದಾರೆ, ಶಿವಳ್ಳಿಗೆ ಬಂದು ಅಲೋಪತಿ ಪ್ರಾಕ್ಟಿಸ್‌ ಮಾಡ್ತಿದ್ದಾರೆ ಅಂತ ಜನರೇ ಆಪಾದನೆ ಮಾಡಿದ್ರು. ಇವರೇ ಅದಕ್ಕೆ ಮುಖ್ಯ ಅಂತ ಹೇಳಿದ್ರು. ಅದನ್ನ ನೀವು ಟಿವಿಯಲ್ಲೂ ನೋಡಬಹುದು. ಮೈಸೂರಿನಲ್ಲೂ ಸಹ ಹಲವಾರು ಜನ ಹೇಳಿದ್ರು. ಅದೆಲ್ಲಾ ತನಿಖೆಯಲ್ಲಿ ಗೊತ್ತಾಗುತ್ತೆ. ಆದರೆ ಆತ್ಮಹತ್ಯೆ ಬಗ್ಗೆ ನಾನು ಮಾತನಾಡೋಕೋಗಲ್ಲ. ಅದನ್ನು ಪೊಲೀಸ್‌ ನೋಡಿಕೊಳ್ತಾರೆ” ಎಂದು ದಿನೇಶ್‌ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago