BREAKING NEWS

ಸೆಂಟ್ರಲ್‌ನಲ್ಲಿ ಒಳಹೊಡೆತ ಹೊರಹೊಡೆತ ನಡೆದಿದೆ : ಶೆಟ್ಟರ್‌

ಹುಬ್ಬಳ್ಳಿ : ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಒಳ ಹೊಡೆತ ಮತ್ತು ಹೊರ ಹೊಡೆತ ಎರಡೂ ನಡೆದಿದೆ. ಅಂದರೆ ನನ್ನ ಎದುರಾಳಿ ಬಿಜೆಪಿಗೆ ಯಾವ ರೀತಿ ಶಾಕ್‌ ಆಗಲಿದೆ ಎನ್ನುವುದು ಫಲಿತಾಂಶದ ದಿನ ಕಾದು ನೋಡಿ ಎಂದು ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಮಾತಿಗೂ ಕೃತಿಗೂ ಹೊಂದಾಣಿಕೆಯೇ ಇಲ್ಲ. ಇಲ್ಲಿ ನೋಡಿದರೆ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮೋದಿ ಮುಖ ನೋಡಿ ಮತ ಹಾಕಿ ಎಂದು ಕೇಳುತ್ತಾರೆ. ಬಿಜೆಪಿಯವರಿಗೆ ಪಕ್ಷವೇ ಮುಖ್ಯ ಎನ್ನುವುದಾದರೆ, ವ್ಯಕ್ತಿಯಾಗಿರುವ ಮೋದಿಯವರ ಮುಖ ಯಾಕೆ ಮುಂದೆ ಮಾಡಬೇಕು.

ಒಂದು ವೇಳೆ ಪಕ್ಷವೇ ಮುಖ್ಯವಾದರೆ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಏಕೆ ಗೆಲ್ಲಲಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಯಾವುದೇ ಚುನಾವಣೆ ಇರಲಿ ವೈಯಕ್ತಿಕ ನಾಯಕತ್ವ, ಪಕ್ಷದ ಶಕ್ತಿ ಇದ್ದಾಗ ಮಾತ್ರ ಗೆಲುವು ಸಾಧ್ಯ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಣ ಚುನಾವಣೆಯೇ ಹೊರತು, ಶೆಟ್ಟರ್‌ ಮತ್ತು ಕೇಂದ್ರ ಸರ್ಕಾರದ ನಡುವಣ ಚುನಾವಣೆಯಲ್ಲ. ಕಾಂಗ್ರೆಸ್‌ ಅಭ್ಯರ್ಥಿಯಾದ ನಂತರ ದೊಡ್ಡ ಪ್ರಮಾಣದಲ್ಲಿ ನನಗೆ ಜನಬೆಂಬಲ ಸಿಕ್ಕಿದೆ. ದೊಡ್ಡ ಪ್ರಮಾಣದಲ್ಲಿ ಒಳ ಹೊಡೆತ ಆಗಿದೆ. ಫಲಿತಾಂಶದ ದಿನ ಅದರ ಪರಿಣಾಮ ಗೊತ್ತಾಗಲಿದೆ. ಹೆಚ್ಚಿನ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

lokesh

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

3 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

7 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

12 mins ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

3 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

3 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

3 hours ago