ಹುಬ್ಬಳ್ಳಿ : ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಒಳ ಹೊಡೆತ ಮತ್ತು ಹೊರ ಹೊಡೆತ ಎರಡೂ ನಡೆದಿದೆ. ಅಂದರೆ ನನ್ನ ಎದುರಾಳಿ ಬಿಜೆಪಿಗೆ ಯಾವ ರೀತಿ ಶಾಕ್ ಆಗಲಿದೆ ಎನ್ನುವುದು ಫಲಿತಾಂಶದ ದಿನ ಕಾದು ನೋಡಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಮಾತಿಗೂ ಕೃತಿಗೂ ಹೊಂದಾಣಿಕೆಯೇ ಇಲ್ಲ. ಇಲ್ಲಿ ನೋಡಿದರೆ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮೋದಿ ಮುಖ ನೋಡಿ ಮತ ಹಾಕಿ ಎಂದು ಕೇಳುತ್ತಾರೆ. ಬಿಜೆಪಿಯವರಿಗೆ ಪಕ್ಷವೇ ಮುಖ್ಯ ಎನ್ನುವುದಾದರೆ, ವ್ಯಕ್ತಿಯಾಗಿರುವ ಮೋದಿಯವರ ಮುಖ ಯಾಕೆ ಮುಂದೆ ಮಾಡಬೇಕು.
ಒಂದು ವೇಳೆ ಪಕ್ಷವೇ ಮುಖ್ಯವಾದರೆ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಏಕೆ ಗೆಲ್ಲಲಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಯಾವುದೇ ಚುನಾವಣೆ ಇರಲಿ ವೈಯಕ್ತಿಕ ನಾಯಕತ್ವ, ಪಕ್ಷದ ಶಕ್ತಿ ಇದ್ದಾಗ ಮಾತ್ರ ಗೆಲುವು ಸಾಧ್ಯ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಚುನಾವಣೆಯೇ ಹೊರತು, ಶೆಟ್ಟರ್ ಮತ್ತು ಕೇಂದ್ರ ಸರ್ಕಾರದ ನಡುವಣ ಚುನಾವಣೆಯಲ್ಲ. ಕಾಂಗ್ರೆಸ್ ಅಭ್ಯರ್ಥಿಯಾದ ನಂತರ ದೊಡ್ಡ ಪ್ರಮಾಣದಲ್ಲಿ ನನಗೆ ಜನಬೆಂಬಲ ಸಿಕ್ಕಿದೆ. ದೊಡ್ಡ ಪ್ರಮಾಣದಲ್ಲಿ ಒಳ ಹೊಡೆತ ಆಗಿದೆ. ಫಲಿತಾಂಶದ ದಿನ ಅದರ ಪರಿಣಾಮ ಗೊತ್ತಾಗಲಿದೆ. ಹೆಚ್ಚಿನ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…