BREAKING NEWS

ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ : ಎಚ್​ಡಿಕೆ ವಾಗ್ದಾಳಿ

ಬೆಂಗಳೂರು : ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ವಾಗ್ದಾಳಿ ಮಾಡಿದ್ದರು. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್​​ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್​​ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.​​​

ಜಾತ್ಯತೀತ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್​​​ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್​ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು ಸವಾಲು ಹಾಕಿದ್ದಾರೆ.

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್​ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ ಮರೆತಿರಾ ಛದ್ಮವೇಷಧಾರಿ?? ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ವಾಗ್ದಾಳಿ ಮಾಡಿದರು.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್​​ಡಿ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಹ್ಯಷ್​​ಟ್ಯಾಗ್​​ ಛದ್ಮವೇಷಧಾರಿ ಎಂದು ಟ್ವೀಟ್​ ಮಾಡಿದ್ದಾರೆ.

lokesh

Recent Posts

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

19 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

2 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

3 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

5 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

14 hours ago