BREAKING NEWS

ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ : ಎಚ್​ಡಿಕೆ ವಾಗ್ದಾಳಿ

ಬೆಂಗಳೂರು : ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ವಾಗ್ದಾಳಿ ಮಾಡಿದ್ದರು. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್​​ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್​​ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.​​​

ಜಾತ್ಯತೀತ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್​​​ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್​ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು ಸವಾಲು ಹಾಕಿದ್ದಾರೆ.

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್​ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ ಮರೆತಿರಾ ಛದ್ಮವೇಷಧಾರಿ?? ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ವಾಗ್ದಾಳಿ ಮಾಡಿದರು.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್​​ಡಿ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಹ್ಯಷ್​​ಟ್ಯಾಗ್​​ ಛದ್ಮವೇಷಧಾರಿ ಎಂದು ಟ್ವೀಟ್​ ಮಾಡಿದ್ದಾರೆ.

lokesh

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

34 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago