BREAKING NEWS

ಸರ್ವಾಧಿಕಾರಿ ಹಿಟ್ಲರ್‌ಗೂ, ಪ್ರಧಾನಿ ಮೋದಿಗೂ ವ್ಯತ್ಯಾಸವಿಲ್ಲ : ಉದ್ಧವ್ ಠಾಕ್ರೆ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. ಶಿವಸೇನೆ ಸಂಸ್ಥಾಪನಾ ದಿನದ ಮುನ್ನಾ ದಿನ ಮುಂಬೈನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸುತ್ತಾ, ಹಿಟ್ಲರ್ ಕೂಡ ಹೀಗೆಯೇ, ಅವನ ಆರಂಭವೂ ಇದೇ ಆಗಿತ್ತು. ಮೊದಲು ಮಾಧ್ಯಮವನ್ನು ನಿಯಂತ್ರಿಸಿದನು. ನಂತರ ಅಧಿಕಾರವನ್ನು ಕೇಂದ್ರೀಕರಿಸಿದನು. ನಾವು ಹಿಟ್ಲರನ ಮಾರ್ಗವನ್ನು ಅನುಸರಿಸುತ್ತಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ. ರೈತರ ಪ್ರತಿಭಟನೆ ವೇಳೆ ಸಾಮಾಜಿಕ ಮಾಧ್ಯಮಗಳೆಲ್ಲಾ ಸರ್ಕಾರದ ಒತ್ತಡಕ್ಕೆ ಒಳಗಾಗಿತ್ತು ಎಂದು ಟ್ವಿಟರ್ ಮಾಜಿ ಸಿಇಒ ಜಾಕ್ ದೋರ್ಸಿ ಅವರ ಹೇಳಿಕೆ ಬೆನ್ನಲ್ಲೇ, ಠಾಕ್ರೆ ಈ ರೀತಿ ಪ್ರಶ್ನಿಸಿದ್ದಾರೆ.

ಮಣಿಪುರಕ್ಕೆ ಹೋಗದ ಪಿಎಂ ವಿರುದ್ಧ ಟೀಕೆ : ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ಮೋದಿಯವರನ್ನೂ ಠಾಕ್ರೆ ತರಾಟೆಗೆ ತೆಗೆದುಕೊಂಡರು. ಮೋದಿ ಅವರು ಅಮೆರಿಕಕ್ಕೆ ಹೋಗುತ್ತಿದ್ದಾರೆ ಆದರೆ ಮಣಿಪುರಕ್ಕೆ ಇದುವರೆಗೂ ಹೋಗಿಲ್ಲ. ನಿಮಗೆ ಧೈರ್ಯವಿದ್ದರೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತಂಡಗಳನ್ನು ಮಣಿಪುರಕ್ಕೆ ಕಳುಹಿಸಿ. ಅಲ್ಲಿನ ಜನರು ಅವರನ್ನು ನಿಯಂತ್ರಿಸುತ್ತಾರೆ ಎಂದರು.
ಗೃಹ ಸಚಿವ ಅಮಿತ್ ಶಾ ಅವರನ್ನು ಅಫ್ಘಾನಿಸ್ತಾನದ ಆಡಳಿತಗಾರ ಅಹ್ಮದ್ ಶಾ ಅಬ್ದಾಲಿಗೆ ಪರೋಕ್ಷವಾಗಿ ಹೋಲಿಸಿದ್ದಾರೆ.

ಶಿವಸೇನೆ ಕಾರ್ಯಕರ್ತರಿಗೆ ಧನ್ಯವಾದ : ಶಿವಸೇನಾ ಸಂಸ್ಥಾಪನಾ ದಿನವಾದ್ದರಿಂದ ಉದ್ಧವ್ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು. ನಿಮ್ಮಂತಹ ಹೋರಾಟಗಾರರು ನನ್ನೊಂದಿಗೆ ಇರುವುದು ನನ್ನ ಅದೃಷ್ಟ. ನಿಮ್ಮ ಸಾಲವನ್ನು ತೀರಿಸಲು ನನ್ನಿಂದ ಸಾಧ್ಯವಿಲ್ಲ. ನನ್ನ ಬಳಿ ಕಾಗದದ ಮೇಲೆ ಏನೂ ಇಲ್ಲ. ಪಕ್ಷದ ಹೆಸರಿಲ್ಲ, ಪಕ್ಷದ ಚಿಹ್ನೆ ಇಲ್ಲ, ಆದರೂ ನೀವೆಲ್ಲರೂ ನನ್ನೊಂದಿಗಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದಗಳು’ ಎಂದರು.

lokesh

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

20 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

39 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago