BREAKING NEWS

ಸರ್ವಾಧಿಕಾರಿ ಹಿಟ್ಲರ್‌ಗೂ, ಪ್ರಧಾನಿ ಮೋದಿಗೂ ವ್ಯತ್ಯಾಸವಿಲ್ಲ : ಉದ್ಧವ್ ಠಾಕ್ರೆ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. ಶಿವಸೇನೆ ಸಂಸ್ಥಾಪನಾ ದಿನದ ಮುನ್ನಾ ದಿನ ಮುಂಬೈನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸುತ್ತಾ, ಹಿಟ್ಲರ್ ಕೂಡ ಹೀಗೆಯೇ, ಅವನ ಆರಂಭವೂ ಇದೇ ಆಗಿತ್ತು. ಮೊದಲು ಮಾಧ್ಯಮವನ್ನು ನಿಯಂತ್ರಿಸಿದನು. ನಂತರ ಅಧಿಕಾರವನ್ನು ಕೇಂದ್ರೀಕರಿಸಿದನು. ನಾವು ಹಿಟ್ಲರನ ಮಾರ್ಗವನ್ನು ಅನುಸರಿಸುತ್ತಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ. ರೈತರ ಪ್ರತಿಭಟನೆ ವೇಳೆ ಸಾಮಾಜಿಕ ಮಾಧ್ಯಮಗಳೆಲ್ಲಾ ಸರ್ಕಾರದ ಒತ್ತಡಕ್ಕೆ ಒಳಗಾಗಿತ್ತು ಎಂದು ಟ್ವಿಟರ್ ಮಾಜಿ ಸಿಇಒ ಜಾಕ್ ದೋರ್ಸಿ ಅವರ ಹೇಳಿಕೆ ಬೆನ್ನಲ್ಲೇ, ಠಾಕ್ರೆ ಈ ರೀತಿ ಪ್ರಶ್ನಿಸಿದ್ದಾರೆ.

ಮಣಿಪುರಕ್ಕೆ ಹೋಗದ ಪಿಎಂ ವಿರುದ್ಧ ಟೀಕೆ : ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ಮೋದಿಯವರನ್ನೂ ಠಾಕ್ರೆ ತರಾಟೆಗೆ ತೆಗೆದುಕೊಂಡರು. ಮೋದಿ ಅವರು ಅಮೆರಿಕಕ್ಕೆ ಹೋಗುತ್ತಿದ್ದಾರೆ ಆದರೆ ಮಣಿಪುರಕ್ಕೆ ಇದುವರೆಗೂ ಹೋಗಿಲ್ಲ. ನಿಮಗೆ ಧೈರ್ಯವಿದ್ದರೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತಂಡಗಳನ್ನು ಮಣಿಪುರಕ್ಕೆ ಕಳುಹಿಸಿ. ಅಲ್ಲಿನ ಜನರು ಅವರನ್ನು ನಿಯಂತ್ರಿಸುತ್ತಾರೆ ಎಂದರು.
ಗೃಹ ಸಚಿವ ಅಮಿತ್ ಶಾ ಅವರನ್ನು ಅಫ್ಘಾನಿಸ್ತಾನದ ಆಡಳಿತಗಾರ ಅಹ್ಮದ್ ಶಾ ಅಬ್ದಾಲಿಗೆ ಪರೋಕ್ಷವಾಗಿ ಹೋಲಿಸಿದ್ದಾರೆ.

ಶಿವಸೇನೆ ಕಾರ್ಯಕರ್ತರಿಗೆ ಧನ್ಯವಾದ : ಶಿವಸೇನಾ ಸಂಸ್ಥಾಪನಾ ದಿನವಾದ್ದರಿಂದ ಉದ್ಧವ್ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು. ನಿಮ್ಮಂತಹ ಹೋರಾಟಗಾರರು ನನ್ನೊಂದಿಗೆ ಇರುವುದು ನನ್ನ ಅದೃಷ್ಟ. ನಿಮ್ಮ ಸಾಲವನ್ನು ತೀರಿಸಲು ನನ್ನಿಂದ ಸಾಧ್ಯವಿಲ್ಲ. ನನ್ನ ಬಳಿ ಕಾಗದದ ಮೇಲೆ ಏನೂ ಇಲ್ಲ. ಪಕ್ಷದ ಹೆಸರಿಲ್ಲ, ಪಕ್ಷದ ಚಿಹ್ನೆ ಇಲ್ಲ, ಆದರೂ ನೀವೆಲ್ಲರೂ ನನ್ನೊಂದಿಗಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದಗಳು’ ಎಂದರು.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

12 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

12 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

14 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

14 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

14 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

15 hours ago