BREAKING NEWS

ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದೇವೆ. ಎಂದಿನಂತೆ ಅಂಗಡಿಗಳು ಓಪನ್ ಇವೆ, ವಾಹನಗಳು ಓಡಾಡುತ್ತಿವೆ ಎಂದರು.

ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗುತ್ತಾರೆ. ಬಳಿಕ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ವಾದ ಮಂಡಿಸಿದವರೆಲ್ಲರೂ ಭಾಗಿಯಾಗುತ್ತಾರೆ ಎಂದರು.

ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಮಾತನಾಡುತ್ತಿದ್ದೇವೆ. ಸಂಕಷ್ಟ ಸೂತ್ರದ ಬಗ್ಗೆ ನಾವು ರೆಡಿ ಮಾಡಿಕೊಳ್ಳುತ್ತೇವೆ. ಬಳಿಕ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.

ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.

lokesh

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

2 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

2 hours ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

3 hours ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

3 hours ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

3 hours ago