ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದೇವೆ. ಎಂದಿನಂತೆ ಅಂಗಡಿಗಳು ಓಪನ್ ಇವೆ, ವಾಹನಗಳು ಓಡಾಡುತ್ತಿವೆ ಎಂದರು.
ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗುತ್ತಾರೆ. ಬಳಿಕ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ವಾದ ಮಂಡಿಸಿದವರೆಲ್ಲರೂ ಭಾಗಿಯಾಗುತ್ತಾರೆ ಎಂದರು.
ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಮಾತನಾಡುತ್ತಿದ್ದೇವೆ. ಸಂಕಷ್ಟ ಸೂತ್ರದ ಬಗ್ಗೆ ನಾವು ರೆಡಿ ಮಾಡಿಕೊಳ್ಳುತ್ತೇವೆ. ಬಳಿಕ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.
ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…