ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದೇವೆ. ಎಂದಿನಂತೆ ಅಂಗಡಿಗಳು ಓಪನ್ ಇವೆ, ವಾಹನಗಳು ಓಡಾಡುತ್ತಿವೆ ಎಂದರು.
ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗುತ್ತಾರೆ. ಬಳಿಕ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ವಾದ ಮಂಡಿಸಿದವರೆಲ್ಲರೂ ಭಾಗಿಯಾಗುತ್ತಾರೆ ಎಂದರು.
ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಮಾತನಾಡುತ್ತಿದ್ದೇವೆ. ಸಂಕಷ್ಟ ಸೂತ್ರದ ಬಗ್ಗೆ ನಾವು ರೆಡಿ ಮಾಡಿಕೊಳ್ಳುತ್ತೇವೆ. ಬಳಿಕ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.
ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…