BREAKING NEWS

ಏಪ್ರಿಲ್‌ 1ರಿಂದ ಆದಾಯ ತೆರಿಗೆ ಸೇರಿ ಬದಲಾಗುತ್ತಿವೆ ಈ 5 ಪ್ರಮುಖ ನಿಯಮಗಳು

ಬೆಂಗಳೂರು : ಏಪ್ರಿಲ್‌ 1ರಿಂದ ಹೊಸ ಹಣಕಾಸು ವರ್ಷ (2023 – 24) ಆರಂಭವಾಗಿದೆ. ಹೊಸ ಹೂಡಿಕೆಗಳಿಗೆ ಮತ್ತು ಹಣಕಾಸು ಯೋಜನೆಗಳಿಗೆ ಇದು ಉತ್ತಮ ಸಮಯವಾಗಿದೆ. ಆದರೆ, ಹೊಸ ವಿತ್ತ ವರ್ಷದ ಆರಂಭದೊಂದಿಗೆ ಹಲವು ಹಣಕಾಸು ನಿಯಮಗಳು ಬದಲಾಗಲಿವೆ.

ಮ್ಯೂಚುವಲ್‌ ಫಂಡ್‌ಗಳ ಮೇಲಿನ ತೆರಿಗೆಯಿಂದ ಹಿಡಿದು ಎನ್‌ಪಿಎಸ್‌ ಹಿಂಪಡೆಯುವಿಕೆ, ಅಂಚೆ ಕಚೇರಿ ಯೋಜನೆವರೆಗೆ ಹಲವು ಹಣಕಾಸು ವಿಷಯಗಳ ನಿಯಮ ಬದಲಾಗುತ್ತಿವೆ. ಈ ಬದಲಾವಣೆಗಳು ನಿಮ್ಮ ಹೂಡಿಕೆಯ ಮೇಲೆ ಹೇಗೆ ಪರಿಣಾಮ ಬೀರಲಿವೆ ಎಂಬ ಮಾಹಿತಿ ಇಲ್ಲಿದೆ.

2023ರ ಬಜೆಟ್‌ನಲ್ಲಿ ಘೋಷಿಸಲಾದ ಆದಾಯ ತೆರಿಗೆ ಸಂಬಂಧಿತ ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರಲಿವೆ. ಇದು ತೆರಿಗೆಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆಯಾಗಿದ್ದು, ಹೊಸ ತೆರಿಗೆ ವ್ಯವಸ್ಥೆಯಲ್ಲಿ ಇದುವರೆಗ 5 ಲಕ್ಷ ರೂ. ಇದ್ದ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಹೊಸ ತೆರಿಗೆ ಸ್ಪ್ಯಾಬ್‌ಗಳು ಏ. 1ರಿಂದ ಅನ್ವಯವಾಗಲಿವೆ.

ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ ಏರಿಕೆ : ಸರಕಾರಿ ಉದ್ಯೋಗಿಗಳ ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ 3 ಲಕ್ಷ ರೂ.ನಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ಇದರೊಂದಿಗೆ ಜೀವ ವಿಮೆಗೆ 5 ಲಕ್ಷಕ್ಕಿಂತ ಹೆಚ್ಚು ಪ್ರೀಮಿಯಂ ನೀಡಿದರೆ ತೆರಿಗೆ ಪಾವತಿಸಬೇಕಾಗುತ್ತದೆ.

ಎಲೆಕ್ಟ್ರಾನಿಕ್‌ ಚಿನ್ನಕ್ಕೆ ಬಂಡವಾಳ ತೆರಿಗೆ ಇಲ್ಲ : ಮಾರುಕಟ್ಟೆ ಸಂಬಂಧಿತ ಡಿಬೆಂಚರ್‌ಗಳಲ್ಲಿನ ಹೂಡಿಕೆಯು ಅಲ್ಪಾವಧಿಯ ಬಂಡವಾಳ ಆಸ್ತಿಯಾಗಿರುತ್ತದೆ ಮತ್ತು ಭೌತಿಕ ಚಿನ್ನವನ್ನು ಎಲೆಕ್ಟ್ರಾನಿಕ್‌ ಚಿನ್ನವಾಗಿ ಪರಿವರ್ತಿಸಿದರೆ ಯಾವುದೇ ಬಂಡವಾಳ ತೆರಿಗೆ ಇರುವುದಿಲ್ಲ.

ಮ್ಯೂಚುಯಲ್‌ ಫಂಡ್‌ಗಳಿಗೆ ಎಲ್‌ಟಿಸಿಜಿ ತೆರಿಗೆ ಪ್ರಯೋಜನ ಇಲ್ಲ : ಏಪ್ರಿಲ್‌ 1ರಿಂದ ಸಾಲ ಮ್ಯೂಚುವಲ್‌ ಫಂಡ್‌ಗಳ ಮೇಲೆ ಎಲ್‌ಟಿಸಿಜಿ ತೆರಿಗೆಯ ಪ್ರಯೋಜನವನ್ನು ನೀಡಲಾಗುವುದಿಲ್ಲ. ಅಲ್ಪಾವಧಿಯ ಲಾಭದ ಶೇ. 35ಕ್ಕಿಂತ ಕಡಿಮೆ ಇರುವ ಈಕ್ವಿಟಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಹ ತೆರಿಗೆ ವಿಧಿಸಲಾಗುತ್ತದೆ. ಇದು ಪ್ರಸ್ತುತ ತೆರಿಗೆ ವಿನಾಯಿತಿ ಪಡೆಯುವ ವರ್ಗದಲ್ಲಿದೆ.

ಅಂಚೆ ಕಚೇರಿ ಯೋಜನೆಗಳಲ್ಲಿ ಬದಲಾವಣೆ : ಏಪ್ರಿಲ್‌ 1ರಿಂದ, ಸೀನಿಯರ್‌ ಸಿಟಿಜನ್‌ ಸೇವಿಂಗ್ಸ್‌ ಸ್ಕೀಮ್‌ನಲ್ಲಿ ಹೂಡಿಕೆ ಮಿತಿಯನ್ನು 15 ಲಕ್ಷ ರೂ.ನಿಂದ 30 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುತ್ತದೆ. ಇದಲ್ಲದೇ, ಮಾಸಿಕ ಆದಾಯ ಯೋಜನೆಯಲ್ಲಿ ಹೂಡಿಕೆಯ ಮಿತಿಯನ್ನು 4.5 ಲಕ್ಷ ರೂ.ನಿಂದ 9 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಜಂಟಿ ಖಾತೆಯಡಿ ಹೂಡಿಕೆ ಮಿತಿಯನ್ನು 9 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಎರಡೂ ಯೋಜನೆಗಳು ಜನರಿಗೆ ನಿಯಮಿತ ಆದಾಯದ ಲಾಭ ನೀಡುತ್ತವೆ.

ಇದಲ್ಲದೆ ಇನ್ನೂ ಹಲವು ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರುತ್ತಿವೆ. ಅವುಗಳಲ್ಲಿ ಪ್ರಮುಖವಾಗಿ ಮಾರುತಿ ಸುಜುಕಿ ಕಾರುಗಳ ದರ ಏರಿಕೆಯಾಗುತ್ತಿದೆ. ಕರ್ನಾಟಕದ 36 ಟೋಲ್‌ಗಳಲ್ಲಿ ಶುಲ್ಕ ಹೆಚ್ಚಳವೂ ಅನ್ವಯವಾಗುತ್ತಿದೆ.

lokesh

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

1 hour ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

2 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago