BREAKING NEWS

ಏಪ್ರಿಲ್‌ 1ರಿಂದ ಆದಾಯ ತೆರಿಗೆ ಸೇರಿ ಬದಲಾಗುತ್ತಿವೆ ಈ 5 ಪ್ರಮುಖ ನಿಯಮಗಳು

ಬೆಂಗಳೂರು : ಏಪ್ರಿಲ್‌ 1ರಿಂದ ಹೊಸ ಹಣಕಾಸು ವರ್ಷ (2023 – 24) ಆರಂಭವಾಗಿದೆ. ಹೊಸ ಹೂಡಿಕೆಗಳಿಗೆ ಮತ್ತು ಹಣಕಾಸು ಯೋಜನೆಗಳಿಗೆ ಇದು ಉತ್ತಮ ಸಮಯವಾಗಿದೆ. ಆದರೆ, ಹೊಸ ವಿತ್ತ ವರ್ಷದ ಆರಂಭದೊಂದಿಗೆ ಹಲವು ಹಣಕಾಸು ನಿಯಮಗಳು ಬದಲಾಗಲಿವೆ.

ಮ್ಯೂಚುವಲ್‌ ಫಂಡ್‌ಗಳ ಮೇಲಿನ ತೆರಿಗೆಯಿಂದ ಹಿಡಿದು ಎನ್‌ಪಿಎಸ್‌ ಹಿಂಪಡೆಯುವಿಕೆ, ಅಂಚೆ ಕಚೇರಿ ಯೋಜನೆವರೆಗೆ ಹಲವು ಹಣಕಾಸು ವಿಷಯಗಳ ನಿಯಮ ಬದಲಾಗುತ್ತಿವೆ. ಈ ಬದಲಾವಣೆಗಳು ನಿಮ್ಮ ಹೂಡಿಕೆಯ ಮೇಲೆ ಹೇಗೆ ಪರಿಣಾಮ ಬೀರಲಿವೆ ಎಂಬ ಮಾಹಿತಿ ಇಲ್ಲಿದೆ.

2023ರ ಬಜೆಟ್‌ನಲ್ಲಿ ಘೋಷಿಸಲಾದ ಆದಾಯ ತೆರಿಗೆ ಸಂಬಂಧಿತ ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರಲಿವೆ. ಇದು ತೆರಿಗೆಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆಯಾಗಿದ್ದು, ಹೊಸ ತೆರಿಗೆ ವ್ಯವಸ್ಥೆಯಲ್ಲಿ ಇದುವರೆಗ 5 ಲಕ್ಷ ರೂ. ಇದ್ದ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಹೊಸ ತೆರಿಗೆ ಸ್ಪ್ಯಾಬ್‌ಗಳು ಏ. 1ರಿಂದ ಅನ್ವಯವಾಗಲಿವೆ.

ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ ಏರಿಕೆ : ಸರಕಾರಿ ಉದ್ಯೋಗಿಗಳ ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ 3 ಲಕ್ಷ ರೂ.ನಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ಇದರೊಂದಿಗೆ ಜೀವ ವಿಮೆಗೆ 5 ಲಕ್ಷಕ್ಕಿಂತ ಹೆಚ್ಚು ಪ್ರೀಮಿಯಂ ನೀಡಿದರೆ ತೆರಿಗೆ ಪಾವತಿಸಬೇಕಾಗುತ್ತದೆ.

ಎಲೆಕ್ಟ್ರಾನಿಕ್‌ ಚಿನ್ನಕ್ಕೆ ಬಂಡವಾಳ ತೆರಿಗೆ ಇಲ್ಲ : ಮಾರುಕಟ್ಟೆ ಸಂಬಂಧಿತ ಡಿಬೆಂಚರ್‌ಗಳಲ್ಲಿನ ಹೂಡಿಕೆಯು ಅಲ್ಪಾವಧಿಯ ಬಂಡವಾಳ ಆಸ್ತಿಯಾಗಿರುತ್ತದೆ ಮತ್ತು ಭೌತಿಕ ಚಿನ್ನವನ್ನು ಎಲೆಕ್ಟ್ರಾನಿಕ್‌ ಚಿನ್ನವಾಗಿ ಪರಿವರ್ತಿಸಿದರೆ ಯಾವುದೇ ಬಂಡವಾಳ ತೆರಿಗೆ ಇರುವುದಿಲ್ಲ.

ಮ್ಯೂಚುಯಲ್‌ ಫಂಡ್‌ಗಳಿಗೆ ಎಲ್‌ಟಿಸಿಜಿ ತೆರಿಗೆ ಪ್ರಯೋಜನ ಇಲ್ಲ : ಏಪ್ರಿಲ್‌ 1ರಿಂದ ಸಾಲ ಮ್ಯೂಚುವಲ್‌ ಫಂಡ್‌ಗಳ ಮೇಲೆ ಎಲ್‌ಟಿಸಿಜಿ ತೆರಿಗೆಯ ಪ್ರಯೋಜನವನ್ನು ನೀಡಲಾಗುವುದಿಲ್ಲ. ಅಲ್ಪಾವಧಿಯ ಲಾಭದ ಶೇ. 35ಕ್ಕಿಂತ ಕಡಿಮೆ ಇರುವ ಈಕ್ವಿಟಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಹ ತೆರಿಗೆ ವಿಧಿಸಲಾಗುತ್ತದೆ. ಇದು ಪ್ರಸ್ತುತ ತೆರಿಗೆ ವಿನಾಯಿತಿ ಪಡೆಯುವ ವರ್ಗದಲ್ಲಿದೆ.

ಅಂಚೆ ಕಚೇರಿ ಯೋಜನೆಗಳಲ್ಲಿ ಬದಲಾವಣೆ : ಏಪ್ರಿಲ್‌ 1ರಿಂದ, ಸೀನಿಯರ್‌ ಸಿಟಿಜನ್‌ ಸೇವಿಂಗ್ಸ್‌ ಸ್ಕೀಮ್‌ನಲ್ಲಿ ಹೂಡಿಕೆ ಮಿತಿಯನ್ನು 15 ಲಕ್ಷ ರೂ.ನಿಂದ 30 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುತ್ತದೆ. ಇದಲ್ಲದೇ, ಮಾಸಿಕ ಆದಾಯ ಯೋಜನೆಯಲ್ಲಿ ಹೂಡಿಕೆಯ ಮಿತಿಯನ್ನು 4.5 ಲಕ್ಷ ರೂ.ನಿಂದ 9 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಜಂಟಿ ಖಾತೆಯಡಿ ಹೂಡಿಕೆ ಮಿತಿಯನ್ನು 9 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಎರಡೂ ಯೋಜನೆಗಳು ಜನರಿಗೆ ನಿಯಮಿತ ಆದಾಯದ ಲಾಭ ನೀಡುತ್ತವೆ.

ಇದಲ್ಲದೆ ಇನ್ನೂ ಹಲವು ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರುತ್ತಿವೆ. ಅವುಗಳಲ್ಲಿ ಪ್ರಮುಖವಾಗಿ ಮಾರುತಿ ಸುಜುಕಿ ಕಾರುಗಳ ದರ ಏರಿಕೆಯಾಗುತ್ತಿದೆ. ಕರ್ನಾಟಕದ 36 ಟೋಲ್‌ಗಳಲ್ಲಿ ಶುಲ್ಕ ಹೆಚ್ಚಳವೂ ಅನ್ವಯವಾಗುತ್ತಿದೆ.

lokesh

Recent Posts

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

6 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

10 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

11 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

12 hours ago