BREAKING NEWS

ಏಪ್ರಿಲ್‌ 1ರಿಂದ ಆದಾಯ ತೆರಿಗೆ ಸೇರಿ ಬದಲಾಗುತ್ತಿವೆ ಈ 5 ಪ್ರಮುಖ ನಿಯಮಗಳು

ಬೆಂಗಳೂರು : ಏಪ್ರಿಲ್‌ 1ರಿಂದ ಹೊಸ ಹಣಕಾಸು ವರ್ಷ (2023 – 24) ಆರಂಭವಾಗಿದೆ. ಹೊಸ ಹೂಡಿಕೆಗಳಿಗೆ ಮತ್ತು ಹಣಕಾಸು ಯೋಜನೆಗಳಿಗೆ ಇದು ಉತ್ತಮ ಸಮಯವಾಗಿದೆ. ಆದರೆ, ಹೊಸ ವಿತ್ತ ವರ್ಷದ ಆರಂಭದೊಂದಿಗೆ ಹಲವು ಹಣಕಾಸು ನಿಯಮಗಳು ಬದಲಾಗಲಿವೆ.

ಮ್ಯೂಚುವಲ್‌ ಫಂಡ್‌ಗಳ ಮೇಲಿನ ತೆರಿಗೆಯಿಂದ ಹಿಡಿದು ಎನ್‌ಪಿಎಸ್‌ ಹಿಂಪಡೆಯುವಿಕೆ, ಅಂಚೆ ಕಚೇರಿ ಯೋಜನೆವರೆಗೆ ಹಲವು ಹಣಕಾಸು ವಿಷಯಗಳ ನಿಯಮ ಬದಲಾಗುತ್ತಿವೆ. ಈ ಬದಲಾವಣೆಗಳು ನಿಮ್ಮ ಹೂಡಿಕೆಯ ಮೇಲೆ ಹೇಗೆ ಪರಿಣಾಮ ಬೀರಲಿವೆ ಎಂಬ ಮಾಹಿತಿ ಇಲ್ಲಿದೆ.

2023ರ ಬಜೆಟ್‌ನಲ್ಲಿ ಘೋಷಿಸಲಾದ ಆದಾಯ ತೆರಿಗೆ ಸಂಬಂಧಿತ ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರಲಿವೆ. ಇದು ತೆರಿಗೆಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆಯಾಗಿದ್ದು, ಹೊಸ ತೆರಿಗೆ ವ್ಯವಸ್ಥೆಯಲ್ಲಿ ಇದುವರೆಗ 5 ಲಕ್ಷ ರೂ. ಇದ್ದ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಹೊಸ ತೆರಿಗೆ ಸ್ಪ್ಯಾಬ್‌ಗಳು ಏ. 1ರಿಂದ ಅನ್ವಯವಾಗಲಿವೆ.

ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ ಏರಿಕೆ : ಸರಕಾರಿ ಉದ್ಯೋಗಿಗಳ ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ 3 ಲಕ್ಷ ರೂ.ನಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ಇದರೊಂದಿಗೆ ಜೀವ ವಿಮೆಗೆ 5 ಲಕ್ಷಕ್ಕಿಂತ ಹೆಚ್ಚು ಪ್ರೀಮಿಯಂ ನೀಡಿದರೆ ತೆರಿಗೆ ಪಾವತಿಸಬೇಕಾಗುತ್ತದೆ.

ಎಲೆಕ್ಟ್ರಾನಿಕ್‌ ಚಿನ್ನಕ್ಕೆ ಬಂಡವಾಳ ತೆರಿಗೆ ಇಲ್ಲ : ಮಾರುಕಟ್ಟೆ ಸಂಬಂಧಿತ ಡಿಬೆಂಚರ್‌ಗಳಲ್ಲಿನ ಹೂಡಿಕೆಯು ಅಲ್ಪಾವಧಿಯ ಬಂಡವಾಳ ಆಸ್ತಿಯಾಗಿರುತ್ತದೆ ಮತ್ತು ಭೌತಿಕ ಚಿನ್ನವನ್ನು ಎಲೆಕ್ಟ್ರಾನಿಕ್‌ ಚಿನ್ನವಾಗಿ ಪರಿವರ್ತಿಸಿದರೆ ಯಾವುದೇ ಬಂಡವಾಳ ತೆರಿಗೆ ಇರುವುದಿಲ್ಲ.

ಮ್ಯೂಚುಯಲ್‌ ಫಂಡ್‌ಗಳಿಗೆ ಎಲ್‌ಟಿಸಿಜಿ ತೆರಿಗೆ ಪ್ರಯೋಜನ ಇಲ್ಲ : ಏಪ್ರಿಲ್‌ 1ರಿಂದ ಸಾಲ ಮ್ಯೂಚುವಲ್‌ ಫಂಡ್‌ಗಳ ಮೇಲೆ ಎಲ್‌ಟಿಸಿಜಿ ತೆರಿಗೆಯ ಪ್ರಯೋಜನವನ್ನು ನೀಡಲಾಗುವುದಿಲ್ಲ. ಅಲ್ಪಾವಧಿಯ ಲಾಭದ ಶೇ. 35ಕ್ಕಿಂತ ಕಡಿಮೆ ಇರುವ ಈಕ್ವಿಟಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಹ ತೆರಿಗೆ ವಿಧಿಸಲಾಗುತ್ತದೆ. ಇದು ಪ್ರಸ್ತುತ ತೆರಿಗೆ ವಿನಾಯಿತಿ ಪಡೆಯುವ ವರ್ಗದಲ್ಲಿದೆ.

ಅಂಚೆ ಕಚೇರಿ ಯೋಜನೆಗಳಲ್ಲಿ ಬದಲಾವಣೆ : ಏಪ್ರಿಲ್‌ 1ರಿಂದ, ಸೀನಿಯರ್‌ ಸಿಟಿಜನ್‌ ಸೇವಿಂಗ್ಸ್‌ ಸ್ಕೀಮ್‌ನಲ್ಲಿ ಹೂಡಿಕೆ ಮಿತಿಯನ್ನು 15 ಲಕ್ಷ ರೂ.ನಿಂದ 30 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುತ್ತದೆ. ಇದಲ್ಲದೇ, ಮಾಸಿಕ ಆದಾಯ ಯೋಜನೆಯಲ್ಲಿ ಹೂಡಿಕೆಯ ಮಿತಿಯನ್ನು 4.5 ಲಕ್ಷ ರೂ.ನಿಂದ 9 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಜಂಟಿ ಖಾತೆಯಡಿ ಹೂಡಿಕೆ ಮಿತಿಯನ್ನು 9 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಎರಡೂ ಯೋಜನೆಗಳು ಜನರಿಗೆ ನಿಯಮಿತ ಆದಾಯದ ಲಾಭ ನೀಡುತ್ತವೆ.

ಇದಲ್ಲದೆ ಇನ್ನೂ ಹಲವು ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರುತ್ತಿವೆ. ಅವುಗಳಲ್ಲಿ ಪ್ರಮುಖವಾಗಿ ಮಾರುತಿ ಸುಜುಕಿ ಕಾರುಗಳ ದರ ಏರಿಕೆಯಾಗುತ್ತಿದೆ. ಕರ್ನಾಟಕದ 36 ಟೋಲ್‌ಗಳಲ್ಲಿ ಶುಲ್ಕ ಹೆಚ್ಚಳವೂ ಅನ್ವಯವಾಗುತ್ತಿದೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago