BREAKING NEWS

ಏಪ್ರಿಲ್‌ 1ರಿಂದ ಆದಾಯ ತೆರಿಗೆ ಸೇರಿ ಬದಲಾಗುತ್ತಿವೆ ಈ 5 ಪ್ರಮುಖ ನಿಯಮಗಳು

ಬೆಂಗಳೂರು : ಏಪ್ರಿಲ್‌ 1ರಿಂದ ಹೊಸ ಹಣಕಾಸು ವರ್ಷ (2023 – 24) ಆರಂಭವಾಗಿದೆ. ಹೊಸ ಹೂಡಿಕೆಗಳಿಗೆ ಮತ್ತು ಹಣಕಾಸು ಯೋಜನೆಗಳಿಗೆ ಇದು ಉತ್ತಮ ಸಮಯವಾಗಿದೆ. ಆದರೆ, ಹೊಸ ವಿತ್ತ ವರ್ಷದ ಆರಂಭದೊಂದಿಗೆ ಹಲವು ಹಣಕಾಸು ನಿಯಮಗಳು ಬದಲಾಗಲಿವೆ.

ಮ್ಯೂಚುವಲ್‌ ಫಂಡ್‌ಗಳ ಮೇಲಿನ ತೆರಿಗೆಯಿಂದ ಹಿಡಿದು ಎನ್‌ಪಿಎಸ್‌ ಹಿಂಪಡೆಯುವಿಕೆ, ಅಂಚೆ ಕಚೇರಿ ಯೋಜನೆವರೆಗೆ ಹಲವು ಹಣಕಾಸು ವಿಷಯಗಳ ನಿಯಮ ಬದಲಾಗುತ್ತಿವೆ. ಈ ಬದಲಾವಣೆಗಳು ನಿಮ್ಮ ಹೂಡಿಕೆಯ ಮೇಲೆ ಹೇಗೆ ಪರಿಣಾಮ ಬೀರಲಿವೆ ಎಂಬ ಮಾಹಿತಿ ಇಲ್ಲಿದೆ.

2023ರ ಬಜೆಟ್‌ನಲ್ಲಿ ಘೋಷಿಸಲಾದ ಆದಾಯ ತೆರಿಗೆ ಸಂಬಂಧಿತ ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರಲಿವೆ. ಇದು ತೆರಿಗೆಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆಯಾಗಿದ್ದು, ಹೊಸ ತೆರಿಗೆ ವ್ಯವಸ್ಥೆಯಲ್ಲಿ ಇದುವರೆಗ 5 ಲಕ್ಷ ರೂ. ಇದ್ದ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಹೊಸ ತೆರಿಗೆ ಸ್ಪ್ಯಾಬ್‌ಗಳು ಏ. 1ರಿಂದ ಅನ್ವಯವಾಗಲಿವೆ.

ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ ಏರಿಕೆ : ಸರಕಾರಿ ಉದ್ಯೋಗಿಗಳ ರಜೆಯ ಪ್ರಯಾಣ ಭತ್ಯೆ ನಗದೀಕರಣ ಮಿತಿ 3 ಲಕ್ಷ ರೂ.ನಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ಇದರೊಂದಿಗೆ ಜೀವ ವಿಮೆಗೆ 5 ಲಕ್ಷಕ್ಕಿಂತ ಹೆಚ್ಚು ಪ್ರೀಮಿಯಂ ನೀಡಿದರೆ ತೆರಿಗೆ ಪಾವತಿಸಬೇಕಾಗುತ್ತದೆ.

ಎಲೆಕ್ಟ್ರಾನಿಕ್‌ ಚಿನ್ನಕ್ಕೆ ಬಂಡವಾಳ ತೆರಿಗೆ ಇಲ್ಲ : ಮಾರುಕಟ್ಟೆ ಸಂಬಂಧಿತ ಡಿಬೆಂಚರ್‌ಗಳಲ್ಲಿನ ಹೂಡಿಕೆಯು ಅಲ್ಪಾವಧಿಯ ಬಂಡವಾಳ ಆಸ್ತಿಯಾಗಿರುತ್ತದೆ ಮತ್ತು ಭೌತಿಕ ಚಿನ್ನವನ್ನು ಎಲೆಕ್ಟ್ರಾನಿಕ್‌ ಚಿನ್ನವಾಗಿ ಪರಿವರ್ತಿಸಿದರೆ ಯಾವುದೇ ಬಂಡವಾಳ ತೆರಿಗೆ ಇರುವುದಿಲ್ಲ.

ಮ್ಯೂಚುಯಲ್‌ ಫಂಡ್‌ಗಳಿಗೆ ಎಲ್‌ಟಿಸಿಜಿ ತೆರಿಗೆ ಪ್ರಯೋಜನ ಇಲ್ಲ : ಏಪ್ರಿಲ್‌ 1ರಿಂದ ಸಾಲ ಮ್ಯೂಚುವಲ್‌ ಫಂಡ್‌ಗಳ ಮೇಲೆ ಎಲ್‌ಟಿಸಿಜಿ ತೆರಿಗೆಯ ಪ್ರಯೋಜನವನ್ನು ನೀಡಲಾಗುವುದಿಲ್ಲ. ಅಲ್ಪಾವಧಿಯ ಲಾಭದ ಶೇ. 35ಕ್ಕಿಂತ ಕಡಿಮೆ ಇರುವ ಈಕ್ವಿಟಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಹ ತೆರಿಗೆ ವಿಧಿಸಲಾಗುತ್ತದೆ. ಇದು ಪ್ರಸ್ತುತ ತೆರಿಗೆ ವಿನಾಯಿತಿ ಪಡೆಯುವ ವರ್ಗದಲ್ಲಿದೆ.

ಅಂಚೆ ಕಚೇರಿ ಯೋಜನೆಗಳಲ್ಲಿ ಬದಲಾವಣೆ : ಏಪ್ರಿಲ್‌ 1ರಿಂದ, ಸೀನಿಯರ್‌ ಸಿಟಿಜನ್‌ ಸೇವಿಂಗ್ಸ್‌ ಸ್ಕೀಮ್‌ನಲ್ಲಿ ಹೂಡಿಕೆ ಮಿತಿಯನ್ನು 15 ಲಕ್ಷ ರೂ.ನಿಂದ 30 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುತ್ತದೆ. ಇದಲ್ಲದೇ, ಮಾಸಿಕ ಆದಾಯ ಯೋಜನೆಯಲ್ಲಿ ಹೂಡಿಕೆಯ ಮಿತಿಯನ್ನು 4.5 ಲಕ್ಷ ರೂ.ನಿಂದ 9 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಜಂಟಿ ಖಾತೆಯಡಿ ಹೂಡಿಕೆ ಮಿತಿಯನ್ನು 9 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಎರಡೂ ಯೋಜನೆಗಳು ಜನರಿಗೆ ನಿಯಮಿತ ಆದಾಯದ ಲಾಭ ನೀಡುತ್ತವೆ.

ಇದಲ್ಲದೆ ಇನ್ನೂ ಹಲವು ಬದಲಾವಣೆಗಳು ಏಪ್ರಿಲ್‌ 1ರಿಂದ ಜಾರಿಗೆ ಬರುತ್ತಿವೆ. ಅವುಗಳಲ್ಲಿ ಪ್ರಮುಖವಾಗಿ ಮಾರುತಿ ಸುಜುಕಿ ಕಾರುಗಳ ದರ ಏರಿಕೆಯಾಗುತ್ತಿದೆ. ಕರ್ನಾಟಕದ 36 ಟೋಲ್‌ಗಳಲ್ಲಿ ಶುಲ್ಕ ಹೆಚ್ಚಳವೂ ಅನ್ವಯವಾಗುತ್ತಿದೆ.

lokesh

Recent Posts

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

2 hours ago

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…

2 hours ago

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…

2 hours ago

ಓದುಗರ ಪತ್ರ: ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…

2 hours ago

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಿ

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …

2 hours ago

ಮಾರುಕಟ್ಟೆಗೆ ಲಗ್ಗೆಯಿಟ್ಟ ಕಡು ನೀಲಿ ಸುಂದರಿ!

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…

2 hours ago