BREAKING NEWS

ತಾಜ್‌ ಹೋಟೆಲ್‌ ದಾಳಿ ಮಾದರಿಯಲ್ಲೇ ಶಾಲೆಗಳಿಗೂ ಬೆದರಿಕೆ ಹಾಕುತ್ತಿದ್ದಾರೆ : ಆರ್.‌ಅಶೋಕ್‌

ಬೆಂಗಳೂರು : ನಗರದ ಹದಿನೈದಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದ್ದ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್‌ ಬೆದರಿಕೆಯಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಮುಂಬೈ ತಾಜ್‌ ಹೋಟೆಲ್‌ ದಾಳಿ ಮಾದರಿಯಲ್ಲಿಯೇ ನಗರದ ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿವೆ. ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಈ ರೀತಿಯ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.

ಇನ್ನು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಬಾಂಬ್‌ ಬೆದರಿಕೆ ಹಾಕಲಾದ ಶಾಲೆಗಳಿಗೆ ತೆರಳಿ ಅಲ್ಲಿನ ಪರಿಸ್ಥಿತಿ ವೀಕ್ಷಣೆ ಮಾಡಿದ್ದಾರೆ.

ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿತ್ತು ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್‌ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದರು.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.

ಬೆದರಿಕೆ ಮೇಲ್‌ ಬಗ್ಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್‌ ಸಿಬ್ಬಂಧಿ ಹಾಗೂ ಬಾಂಬ್‌ ಸ್ಕ್ವಾಡ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಮಳೆ ಕೊರತೆ ನಡುವೆಯೂ ತರಕಾರಿ ಅಗ್ಗ

ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…

2 mins ago

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago