BREAKING NEWS

136 ಸ್ಥಾನ ಬರುತ್ತೆ ಎಂದಿದ್ದಕ್ಕೆ ನನ್ನನ್ನು ಮೆಂಟಲ್‌ ಎಂದಿದ್ದರು : ಡಿ.ಕೆ ಶಿವಕುಮಾರ್

ಬೆಂಗಳೂರು : ಸರ್ಕಾರ ಬರುವ ಸಂದರ್ಭದಲ್ಲಿ 136 ಸ್ಥಾನ ಬರುತ್ತದೆ ಎಂದಿದ್ದೆ. ಆಗ ನನ್ನನ್ನು ಬಹಳಷ್ಟು ಜನ ಮೆಂಟಲ್‌ ಆಗಿದ್ದಾನೆ ಎಂದು ಲೇವಡಿ ಮಾಡಿದ್ದರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹಳೆಯ ವಿಷಯವನ್ನು ಮೆಲುಕು ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕ್ವಿಟ್‌ ಇಂಡಿಯಾ ಚಳುವಳಿ 82ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ನಾವೇ ಸರ್ಕಾರ ಮಾಡುತ್ತೇವೆ ಎಂದು ಹೇಳಿ ಕೆಲವರ ಕಾಲಿಗೆ ಬಿದ್ದಿದ್ದರು. ಅವರ ಹೆಸರು ಹೇಳುವುದಕ್ಕೆ ನಾನು ಇಷ್ಟಪಡುವುದಿಲ್ಲ. ಸಮ್ಮಿಶ್ರ ಸರ್ಕಾರ ಮಾಡುತ್ತೇವೆ ಎಂದು ಬರೆದುಕೊಂಡಿದ್ದರು. ಆದರೆ ನಾನು ಮಾತ್ರ 136ಕ್ಕೆ ಸ್ಟಿಕ್‌ ಆಗಿದ್ದೆ ಎಂದರು.

ಸೋನಿಯಾ ಗಾಂಧಿ ಅವರು ಇಷ್ಟು ಸೀಟ್‌ ಹೇಗೆ ಬರುತ್ತದೆ ಎಂದು ಕೇಳಿದ್ದರು. ನಾನೇ ಹೊಲ ಉತ್ತು, ಗೊಬ್ಬರ ಹಾಕಿದ್ದೇನೆ. ಈ ಕಾರಣದಿಂದ ನನಗೆ ಗೊತ್ತು ಎಂದು ಉತ್ತರಿಸಿದ್ದೆ. ಕೆಲವು ಸೀಟು ಹಂಚಿಕೆಯಲ್ಲಿ ನಾವೂ ಸ್ವಲ್ಪ ತಪ್ಪು ಮಾಡಿದೆವು. 224ರ ಪೈಕಿ 215 ಸೀಟು ಹಂಚಿಕೆ ಒಮ್ಮತದ ಪ್ರಕಾರ ಒಗ್ಗಟ್ಟಿನಲ್ಲೇ ಆಗಿದೆ. ಪಕ್ಷಕ್ಕೋಸ್ಕರ ಹಲವು ಹಿರಿಯರು ಟಿಕೆಟ್‌ ತ್ಯಾಗ ಮಾಡಿದ್ದಾರೆ. ಮಾಟ ಮಂತ್ರ ಮಾಡಿ ಸರ್ಕಾರ ಮಾಡಿದ್ದೇವೆ ಎಂದು ವಿಪಕ್ಷ ನಾಯಕರೊಬ್ಬರು ಮಾತನಾಡಿದ್ದಾರೆ‌. ಅವರ ಹೆಸರು ಹೇಳಲು ಇಷ್ಟ ಪಡುವುದಿಲ್ಲ ಎಂದು ಹೇಳಿ ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ಟಾಂಗ್‌ ಕೊಟ್ಟರು.

ಕ್ವಿಟ್ ಇಂಡಿಯಾ ಚಳುವಳಿ ಮಾದರಿಯೇ ಈಗ ಅಗತ್ಯವಿದೆ. ಅಂದು ಬ್ರಿಟಿಷರ ವಿರುದ್ದ ನಾವು ಹೋರಾಟ ಮಾಡಿದ್ದೆವು. ಇಂದು ಕೋಮುವಾದ, ಸರ್ವಾಧಿಕಾರ ವಿರುದ್ದ ನಾವು ಹೋರಾಟ ಮಾಡಬೇಕಾಗಿದೆ. ಇಂಡಿಯಾ ರಕ್ಷಿಸಿ ಅಂತ ಎಲ್ಲ ರಾಷ್ಟ್ರೀಯ ನಾಯಕರು ಇಂಡಿಯಾ ಸಭೆಗೆ ಬಂದರು. ಬಿಜೆಪಿ ಭಾರತದಿಂದ ಬಿಟ್ಟು ತೊಲಗಲಿ ಅಂತ ಕಾರ್ಯಕ್ರಮ ಮಾಡಬೇಕು. ಕಾಂಗ್ರೆಸ್ ಮುಕ್ತ ಭಾರತ ಅಂತ ಅವರು ಹೇಳುತ್ತಿದ್ದರು. ನಾವು ಈಗ ಬಿಜೆಪಿ ಮುಕ್ತ ಭಾರತ ಮಾಡಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಭಾಗ್ಯದ ಲಕ್ಷ್ಮಿ ಬಾರಮ್ಮ ಹಾಡನ್ನು ಹಾಡಿದ ಡಿಕೆಶಿ ಪ್ರತಿಯೊಂದು ವಾರ್ಡ್, ಬೂತ್, ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಗೃಹ ಲಕ್ಷ್ಮಿ ಕಾರ್ಯಕ್ರಮ ಆಯೋಜಿಸಲಿದ್ದೇವೆ. ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ (Gruha Lakshmi) ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿದ್ದೇವೆ. ಅದರ ನೇರ ಪ್ರಸಾರ ಫಲಾನುಭವಿಗಳನ್ನೆಲ್ಲ ಸೇರಿಸಿ ಪ್ರತಿ ಪಂಚಾಯತಿಯಲ್ಲೂ ಮಾಡಬೇಕು. ಬೆಂಗಳೂರಲ್ಲಿ 198-200 ಕಡೆಗಳಲ್ಲಿ ಗೃಹ ಲಕ್ಷ್ಮಿ ಕಾರ್ಯಕ್ರಮ ಮಾಡುತ್ತೇವೆ. ಜನರನ್ನು ಫಲಾನುಭವಿಗಳನ್ನು ಸೇರಿಸಿ ಸಂಭ್ರಮ ಸಡಗರದ ಮೂಲಕ ಆಚರಿಸಬೇಕು ಎಂದು ಕರೆ ನೀಡಿದರು.

lokesh

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

4 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

4 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

4 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

5 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

6 hours ago