BREAKING NEWS

136 ಸ್ಥಾನ ಬರುತ್ತೆ ಎಂದಿದ್ದಕ್ಕೆ ನನ್ನನ್ನು ಮೆಂಟಲ್‌ ಎಂದಿದ್ದರು : ಡಿ.ಕೆ ಶಿವಕುಮಾರ್

ಬೆಂಗಳೂರು : ಸರ್ಕಾರ ಬರುವ ಸಂದರ್ಭದಲ್ಲಿ 136 ಸ್ಥಾನ ಬರುತ್ತದೆ ಎಂದಿದ್ದೆ. ಆಗ ನನ್ನನ್ನು ಬಹಳಷ್ಟು ಜನ ಮೆಂಟಲ್‌ ಆಗಿದ್ದಾನೆ ಎಂದು ಲೇವಡಿ ಮಾಡಿದ್ದರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹಳೆಯ ವಿಷಯವನ್ನು ಮೆಲುಕು ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕ್ವಿಟ್‌ ಇಂಡಿಯಾ ಚಳುವಳಿ 82ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ನಾವೇ ಸರ್ಕಾರ ಮಾಡುತ್ತೇವೆ ಎಂದು ಹೇಳಿ ಕೆಲವರ ಕಾಲಿಗೆ ಬಿದ್ದಿದ್ದರು. ಅವರ ಹೆಸರು ಹೇಳುವುದಕ್ಕೆ ನಾನು ಇಷ್ಟಪಡುವುದಿಲ್ಲ. ಸಮ್ಮಿಶ್ರ ಸರ್ಕಾರ ಮಾಡುತ್ತೇವೆ ಎಂದು ಬರೆದುಕೊಂಡಿದ್ದರು. ಆದರೆ ನಾನು ಮಾತ್ರ 136ಕ್ಕೆ ಸ್ಟಿಕ್‌ ಆಗಿದ್ದೆ ಎಂದರು.

ಸೋನಿಯಾ ಗಾಂಧಿ ಅವರು ಇಷ್ಟು ಸೀಟ್‌ ಹೇಗೆ ಬರುತ್ತದೆ ಎಂದು ಕೇಳಿದ್ದರು. ನಾನೇ ಹೊಲ ಉತ್ತು, ಗೊಬ್ಬರ ಹಾಕಿದ್ದೇನೆ. ಈ ಕಾರಣದಿಂದ ನನಗೆ ಗೊತ್ತು ಎಂದು ಉತ್ತರಿಸಿದ್ದೆ. ಕೆಲವು ಸೀಟು ಹಂಚಿಕೆಯಲ್ಲಿ ನಾವೂ ಸ್ವಲ್ಪ ತಪ್ಪು ಮಾಡಿದೆವು. 224ರ ಪೈಕಿ 215 ಸೀಟು ಹಂಚಿಕೆ ಒಮ್ಮತದ ಪ್ರಕಾರ ಒಗ್ಗಟ್ಟಿನಲ್ಲೇ ಆಗಿದೆ. ಪಕ್ಷಕ್ಕೋಸ್ಕರ ಹಲವು ಹಿರಿಯರು ಟಿಕೆಟ್‌ ತ್ಯಾಗ ಮಾಡಿದ್ದಾರೆ. ಮಾಟ ಮಂತ್ರ ಮಾಡಿ ಸರ್ಕಾರ ಮಾಡಿದ್ದೇವೆ ಎಂದು ವಿಪಕ್ಷ ನಾಯಕರೊಬ್ಬರು ಮಾತನಾಡಿದ್ದಾರೆ‌. ಅವರ ಹೆಸರು ಹೇಳಲು ಇಷ್ಟ ಪಡುವುದಿಲ್ಲ ಎಂದು ಹೇಳಿ ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ಟಾಂಗ್‌ ಕೊಟ್ಟರು.

ಕ್ವಿಟ್ ಇಂಡಿಯಾ ಚಳುವಳಿ ಮಾದರಿಯೇ ಈಗ ಅಗತ್ಯವಿದೆ. ಅಂದು ಬ್ರಿಟಿಷರ ವಿರುದ್ದ ನಾವು ಹೋರಾಟ ಮಾಡಿದ್ದೆವು. ಇಂದು ಕೋಮುವಾದ, ಸರ್ವಾಧಿಕಾರ ವಿರುದ್ದ ನಾವು ಹೋರಾಟ ಮಾಡಬೇಕಾಗಿದೆ. ಇಂಡಿಯಾ ರಕ್ಷಿಸಿ ಅಂತ ಎಲ್ಲ ರಾಷ್ಟ್ರೀಯ ನಾಯಕರು ಇಂಡಿಯಾ ಸಭೆಗೆ ಬಂದರು. ಬಿಜೆಪಿ ಭಾರತದಿಂದ ಬಿಟ್ಟು ತೊಲಗಲಿ ಅಂತ ಕಾರ್ಯಕ್ರಮ ಮಾಡಬೇಕು. ಕಾಂಗ್ರೆಸ್ ಮುಕ್ತ ಭಾರತ ಅಂತ ಅವರು ಹೇಳುತ್ತಿದ್ದರು. ನಾವು ಈಗ ಬಿಜೆಪಿ ಮುಕ್ತ ಭಾರತ ಮಾಡಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಭಾಗ್ಯದ ಲಕ್ಷ್ಮಿ ಬಾರಮ್ಮ ಹಾಡನ್ನು ಹಾಡಿದ ಡಿಕೆಶಿ ಪ್ರತಿಯೊಂದು ವಾರ್ಡ್, ಬೂತ್, ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಗೃಹ ಲಕ್ಷ್ಮಿ ಕಾರ್ಯಕ್ರಮ ಆಯೋಜಿಸಲಿದ್ದೇವೆ. ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ (Gruha Lakshmi) ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿದ್ದೇವೆ. ಅದರ ನೇರ ಪ್ರಸಾರ ಫಲಾನುಭವಿಗಳನ್ನೆಲ್ಲ ಸೇರಿಸಿ ಪ್ರತಿ ಪಂಚಾಯತಿಯಲ್ಲೂ ಮಾಡಬೇಕು. ಬೆಂಗಳೂರಲ್ಲಿ 198-200 ಕಡೆಗಳಲ್ಲಿ ಗೃಹ ಲಕ್ಷ್ಮಿ ಕಾರ್ಯಕ್ರಮ ಮಾಡುತ್ತೇವೆ. ಜನರನ್ನು ಫಲಾನುಭವಿಗಳನ್ನು ಸೇರಿಸಿ ಸಂಭ್ರಮ ಸಡಗರದ ಮೂಲಕ ಆಚರಿಸಬೇಕು ಎಂದು ಕರೆ ನೀಡಿದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 hour ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

2 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

2 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

2 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

2 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

2 hours ago