BREAKING NEWS

ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ : ಆರ್‌ ಅಶೋಕ್

ಬೆಂಗಳೂರು : ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಕೊರತೆ ಇತ್ತು. ಈ ಸರ್ಕಾರದಲ್ಲಿ ಕೊರತೆಯಿಲ್ಲ. ಬಹುಮತವಿದೆ ಆದರೂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆ ನಂತರ ಮತ್ತೆ ಕೇಂದ್ರದಲ್ಲಿ ನಮ್ಮ‌ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಸರ್ಕಾರ ಉಳಿಯಲ್ಲ ಅಂತ ಗೊತ್ತಿದೆ. ಅದಕ್ಕೆ ಅವರಿಗೆ ಭಯ ಶುರುವಾಗಿದೆ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ತಪ್ಪು ಅಂದರೆ 10,20,30 ಪರ್ಸೆಂಟ್ ಇರಬಹುದು. ಇಲ್ಲವೆ ಶೇ.40, ಶೇ.50ರಷ್ಟಿರಬಹುದು. ಆದರೆ, ತನಿಖೆ ನೆಪದಲ್ಲಿ ಎಲ್ಲಾ ಕೆಲಸ ನಿಲ್ಲಿಸಿದ್ದಾರೆ. ತಪ್ಪು ಮಾಡಿದ್ದರೆ ಜೈಲಿಗೆ ಹಾಕಿ. ರಾಜ್ಯದಲ್ಲಿರುವ ಎಲ್ಲ ಎಂಜಿನಿಯರ್ ಗಳು ಕಳ್ಳರು ಅಂದರೆ ಹೇಗೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ ನೂರು ದಿನ ಪೂರ್ಣ ಮಾಡಿರುವದನ್ನು ಸರ್ಕಾರದ ಕರಾಳ ದಿನ ಅನ್ನಬಹುದು. ರೋಡ್ ಆಗಿಲ್ಲ, ಕುಡಿಯುವ ನೀರು ಕೊಟ್ಟಿಲ್ಲ. ಲೋಕೋಪಯೋಗಿ ಇಲಾಖೆಯ ಒಂದೇ ಒಂದು ಕೆಲಸ ಆಗಿಲ್ಲ. ಎಲ್ಲಾ ಕಡೆ ಬಿಲ್ ಕೊಟ್ಟಿಲ್ಲ. ಎಲ್ಲಾ ಕಡೆ ಕಂಟ್ರ್ಯಾಕ್ಟರ್ ಕೆಲಸ ನಿಲ್ಲಿಸಿದ್ದಾರೆ.‌100 ದಿನಗಳಲ್ಲಿ ಕೆಲಸ ಕುಂಟಿತವಾಗಿದೆ. ಒಂದೇ ಒಂದು ಕೆಲಸ ಆಗಿಲ್ಲ ಎಂದು ಆರೋಪಿಸಿದರು.

ನಮ್ಮ ಸರ್ಕಾರದ ಕೆಲಸ ಎಷ್ಟು ಆಗಿತ್ತೋ ಅಷ್ಟಿದೆ. ದಿನ ನಿತ್ಯ ಉಚಿತ ಉಚಿತ ಅಂತಾರೆ. ಆದರೆ ಜನರಿಗೆ ಬೇಕಾಗಿರೋದು ಅಭಿವೃದ್ಧಿ. ಬೆಂಗಳೂರಿನಲ್ಲೇ ವಿದ್ಯುತ್ ಲೋಡ್ ಶೆಡ್ಡಿಂಗ್ ಇದೆ. ಎಲ್ಲೂ ಅಭಿವೃದ್ಧಿ ಕುರಿತ ಹೇಳಿಕೆ ಇಲ್ಲ. ಸರ್ಕಾರದಲ್ಲಿ ನಯಾ ಪೈಸೆ ಇಲ್ಲ. ಬಿಲ್ ಕೊಡೋಕೆ ಅವರಿಗೆ ಹಣವಿಲ್ಲ ಎಂದು ಟೀಕಿಸಿದರು.

ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಜೊತೆ ನಾನೇ ಮಾತನಾಡಿದ್ದೇನೆ. ಅವರು ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ. ನಮ್ಮವರು ಪಕ್ಷ ಬಿಟ್ಟು ಹೋಗಲ್ಲ. ಯಾರಿಗೆ ಪಕ್ಷ ನಿಷ್ಠೆ ಇದೆಯೋ ಅವರು ಇರುತ್ತಾರೆ. ಯಾರಿಗೆ ಪಕ್ಷ ನಿಷ್ಠೆ ಇಲ್ಲ ಅವರು ಹೋಗುತ್ತಾರೆ. ಸರ್ಕಾರದ ಕೆಲಸ ಅಂದರೆ ಸಭೆ ಮಾಡಬೇಕಾಗುತ್ತದೆ. ಅದಕ್ಕೆ ಆಪಕ್ಷ ಈ ಪಕ್ಷ ಅಂತ ಇಲ್ಲ ಎಂದು ಅವರು ಹೇಳಿದರು‌.

lokesh

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

24 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

47 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

1 hour ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago