BREAKING NEWS

ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ : ಆರ್‌ ಅಶೋಕ್

ಬೆಂಗಳೂರು : ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಕೊರತೆ ಇತ್ತು. ಈ ಸರ್ಕಾರದಲ್ಲಿ ಕೊರತೆಯಿಲ್ಲ. ಬಹುಮತವಿದೆ ಆದರೂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆ ನಂತರ ಮತ್ತೆ ಕೇಂದ್ರದಲ್ಲಿ ನಮ್ಮ‌ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಸರ್ಕಾರ ಉಳಿಯಲ್ಲ ಅಂತ ಗೊತ್ತಿದೆ. ಅದಕ್ಕೆ ಅವರಿಗೆ ಭಯ ಶುರುವಾಗಿದೆ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ತಪ್ಪು ಅಂದರೆ 10,20,30 ಪರ್ಸೆಂಟ್ ಇರಬಹುದು. ಇಲ್ಲವೆ ಶೇ.40, ಶೇ.50ರಷ್ಟಿರಬಹುದು. ಆದರೆ, ತನಿಖೆ ನೆಪದಲ್ಲಿ ಎಲ್ಲಾ ಕೆಲಸ ನಿಲ್ಲಿಸಿದ್ದಾರೆ. ತಪ್ಪು ಮಾಡಿದ್ದರೆ ಜೈಲಿಗೆ ಹಾಕಿ. ರಾಜ್ಯದಲ್ಲಿರುವ ಎಲ್ಲ ಎಂಜಿನಿಯರ್ ಗಳು ಕಳ್ಳರು ಅಂದರೆ ಹೇಗೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ ನೂರು ದಿನ ಪೂರ್ಣ ಮಾಡಿರುವದನ್ನು ಸರ್ಕಾರದ ಕರಾಳ ದಿನ ಅನ್ನಬಹುದು. ರೋಡ್ ಆಗಿಲ್ಲ, ಕುಡಿಯುವ ನೀರು ಕೊಟ್ಟಿಲ್ಲ. ಲೋಕೋಪಯೋಗಿ ಇಲಾಖೆಯ ಒಂದೇ ಒಂದು ಕೆಲಸ ಆಗಿಲ್ಲ. ಎಲ್ಲಾ ಕಡೆ ಬಿಲ್ ಕೊಟ್ಟಿಲ್ಲ. ಎಲ್ಲಾ ಕಡೆ ಕಂಟ್ರ್ಯಾಕ್ಟರ್ ಕೆಲಸ ನಿಲ್ಲಿಸಿದ್ದಾರೆ.‌100 ದಿನಗಳಲ್ಲಿ ಕೆಲಸ ಕುಂಟಿತವಾಗಿದೆ. ಒಂದೇ ಒಂದು ಕೆಲಸ ಆಗಿಲ್ಲ ಎಂದು ಆರೋಪಿಸಿದರು.

ನಮ್ಮ ಸರ್ಕಾರದ ಕೆಲಸ ಎಷ್ಟು ಆಗಿತ್ತೋ ಅಷ್ಟಿದೆ. ದಿನ ನಿತ್ಯ ಉಚಿತ ಉಚಿತ ಅಂತಾರೆ. ಆದರೆ ಜನರಿಗೆ ಬೇಕಾಗಿರೋದು ಅಭಿವೃದ್ಧಿ. ಬೆಂಗಳೂರಿನಲ್ಲೇ ವಿದ್ಯುತ್ ಲೋಡ್ ಶೆಡ್ಡಿಂಗ್ ಇದೆ. ಎಲ್ಲೂ ಅಭಿವೃದ್ಧಿ ಕುರಿತ ಹೇಳಿಕೆ ಇಲ್ಲ. ಸರ್ಕಾರದಲ್ಲಿ ನಯಾ ಪೈಸೆ ಇಲ್ಲ. ಬಿಲ್ ಕೊಡೋಕೆ ಅವರಿಗೆ ಹಣವಿಲ್ಲ ಎಂದು ಟೀಕಿಸಿದರು.

ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಜೊತೆ ನಾನೇ ಮಾತನಾಡಿದ್ದೇನೆ. ಅವರು ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ. ನಮ್ಮವರು ಪಕ್ಷ ಬಿಟ್ಟು ಹೋಗಲ್ಲ. ಯಾರಿಗೆ ಪಕ್ಷ ನಿಷ್ಠೆ ಇದೆಯೋ ಅವರು ಇರುತ್ತಾರೆ. ಯಾರಿಗೆ ಪಕ್ಷ ನಿಷ್ಠೆ ಇಲ್ಲ ಅವರು ಹೋಗುತ್ತಾರೆ. ಸರ್ಕಾರದ ಕೆಲಸ ಅಂದರೆ ಸಭೆ ಮಾಡಬೇಕಾಗುತ್ತದೆ. ಅದಕ್ಕೆ ಆಪಕ್ಷ ಈ ಪಕ್ಷ ಅಂತ ಇಲ್ಲ ಎಂದು ಅವರು ಹೇಳಿದರು‌.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

3 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

4 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago