BREAKING NEWS

ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ : ಆರ್‌ ಅಶೋಕ್

ಬೆಂಗಳೂರು : ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಕೊರತೆ ಇತ್ತು. ಈ ಸರ್ಕಾರದಲ್ಲಿ ಕೊರತೆಯಿಲ್ಲ. ಬಹುಮತವಿದೆ ಆದರೂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆ ನಂತರ ಮತ್ತೆ ಕೇಂದ್ರದಲ್ಲಿ ನಮ್ಮ‌ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಸರ್ಕಾರ ಉಳಿಯಲ್ಲ ಅಂತ ಗೊತ್ತಿದೆ. ಅದಕ್ಕೆ ಅವರಿಗೆ ಭಯ ಶುರುವಾಗಿದೆ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ತಪ್ಪು ಅಂದರೆ 10,20,30 ಪರ್ಸೆಂಟ್ ಇರಬಹುದು. ಇಲ್ಲವೆ ಶೇ.40, ಶೇ.50ರಷ್ಟಿರಬಹುದು. ಆದರೆ, ತನಿಖೆ ನೆಪದಲ್ಲಿ ಎಲ್ಲಾ ಕೆಲಸ ನಿಲ್ಲಿಸಿದ್ದಾರೆ. ತಪ್ಪು ಮಾಡಿದ್ದರೆ ಜೈಲಿಗೆ ಹಾಕಿ. ರಾಜ್ಯದಲ್ಲಿರುವ ಎಲ್ಲ ಎಂಜಿನಿಯರ್ ಗಳು ಕಳ್ಳರು ಅಂದರೆ ಹೇಗೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ ನೂರು ದಿನ ಪೂರ್ಣ ಮಾಡಿರುವದನ್ನು ಸರ್ಕಾರದ ಕರಾಳ ದಿನ ಅನ್ನಬಹುದು. ರೋಡ್ ಆಗಿಲ್ಲ, ಕುಡಿಯುವ ನೀರು ಕೊಟ್ಟಿಲ್ಲ. ಲೋಕೋಪಯೋಗಿ ಇಲಾಖೆಯ ಒಂದೇ ಒಂದು ಕೆಲಸ ಆಗಿಲ್ಲ. ಎಲ್ಲಾ ಕಡೆ ಬಿಲ್ ಕೊಟ್ಟಿಲ್ಲ. ಎಲ್ಲಾ ಕಡೆ ಕಂಟ್ರ್ಯಾಕ್ಟರ್ ಕೆಲಸ ನಿಲ್ಲಿಸಿದ್ದಾರೆ.‌100 ದಿನಗಳಲ್ಲಿ ಕೆಲಸ ಕುಂಟಿತವಾಗಿದೆ. ಒಂದೇ ಒಂದು ಕೆಲಸ ಆಗಿಲ್ಲ ಎಂದು ಆರೋಪಿಸಿದರು.

ನಮ್ಮ ಸರ್ಕಾರದ ಕೆಲಸ ಎಷ್ಟು ಆಗಿತ್ತೋ ಅಷ್ಟಿದೆ. ದಿನ ನಿತ್ಯ ಉಚಿತ ಉಚಿತ ಅಂತಾರೆ. ಆದರೆ ಜನರಿಗೆ ಬೇಕಾಗಿರೋದು ಅಭಿವೃದ್ಧಿ. ಬೆಂಗಳೂರಿನಲ್ಲೇ ವಿದ್ಯುತ್ ಲೋಡ್ ಶೆಡ್ಡಿಂಗ್ ಇದೆ. ಎಲ್ಲೂ ಅಭಿವೃದ್ಧಿ ಕುರಿತ ಹೇಳಿಕೆ ಇಲ್ಲ. ಸರ್ಕಾರದಲ್ಲಿ ನಯಾ ಪೈಸೆ ಇಲ್ಲ. ಬಿಲ್ ಕೊಡೋಕೆ ಅವರಿಗೆ ಹಣವಿಲ್ಲ ಎಂದು ಟೀಕಿಸಿದರು.

ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಜೊತೆ ನಾನೇ ಮಾತನಾಡಿದ್ದೇನೆ. ಅವರು ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ. ನಮ್ಮವರು ಪಕ್ಷ ಬಿಟ್ಟು ಹೋಗಲ್ಲ. ಯಾರಿಗೆ ಪಕ್ಷ ನಿಷ್ಠೆ ಇದೆಯೋ ಅವರು ಇರುತ್ತಾರೆ. ಯಾರಿಗೆ ಪಕ್ಷ ನಿಷ್ಠೆ ಇಲ್ಲ ಅವರು ಹೋಗುತ್ತಾರೆ. ಸರ್ಕಾರದ ಕೆಲಸ ಅಂದರೆ ಸಭೆ ಮಾಡಬೇಕಾಗುತ್ತದೆ. ಅದಕ್ಕೆ ಆಪಕ್ಷ ಈ ಪಕ್ಷ ಅಂತ ಇಲ್ಲ ಎಂದು ಅವರು ಹೇಳಿದರು‌.

lokesh

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

42 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago