BREAKING NEWS

ಶೀಘ್ರದಲ್ಲಿ ಮೋಡ ಬಿತ್ತನೆಗೆ ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಮೋಡ ಬಿತ್ತನೆ ಮಾಡಲು ಎರಡು- ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಸೋಮವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತ್ರಿಕೆಯೆ ನೀಡಿದ ಅವರು “ಎರಡು ದಿನಗಳಿಂದ ಬೆಂಗಳೂರು ನಗರ ಹಾಗೂ ಸುತ್ತಮುತ್ತ ಸುರಿದ ಮಳೆಯಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಮೋಡ ಬಿತ್ತನೆಯಿಂದ ಪರಿಸ್ಥಿತಿ ಸುಧಾರಿಸಬಹುದು ಎನ್ನುವ ನಂಬಿಕೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಹಾಗೂ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ವಿರೋಧ ಪಕ್ಷಗಳ ಮೈತ್ರಿಯಿಂದ ಅಸಮಾಧಾನಿತರು ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದಾಗ, “ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಎರಡೂ ಪಕ್ಷಗಳ ಅಸಮಾಧಾನಿತರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ, ಮುಖ್ಯಮಂತ್ರಿಗಳು ಹಾಗೂ ಸಂಪುಟ ಸಹೋದ್ಯೋಗಿಗಳ ಜೊತೆ ಈ ವಿಚಾರ ಚರ್ಚೆ ನಡೆಸಲಾಗುತ್ತದೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದೇವೆ. ಪಕ್ಷಾಂತರ ಕಾಯ್ದೆ ಬಗ್ಗೆಯೂ ನಮಗೆ ಎಚ್ಚರಿಕೆಯಿದೆ ಎಂದರು.

ಸಚಿವರುಗಳನ್ನು ಲೋಕಸಭೆ ಕ್ಷೇತ್ರಗಳ ವೀಕ್ಷಕರನ್ನಾಗಿ ನೇಮಿಸಿರುವ ಬಗ್ಗೆ ಕೇಳಿದಾಗ, “28 ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ವೀಕ್ಷಕರನ್ನಾಗಿ ನೇಮಕ‌ ಮಾಡಲಾಗಿದೆ. ಇಬ್ಬರು -ಮೂವರು ಸಚಿವರನ್ನು ನೇಮಕ ಮಾಡಲು ಆಗಿಲ್ಲ. ಎಂ.ಬಿ. ಪಾಟೀಲರು ವಿದೇಶದಲ್ಲಿ, ಕೆ.ಜೆ.ಜಾರ್ಜ್ ಅವರು ಪಕ್ಷದ ಕೇಂದ್ರ ಸಮಿತಿಯಲ್ಲಿ ಇರುವ ಕಾರಣ ನೇಮಕ ಮಾಡಲು ಆಗಲಿಲ್ಲ. ಎಲ್ಲಾ ಕ್ಷೇತ್ರಗಳ ವರದಿ 10 ದಿನಗಳಲ್ಲಿ ಕೈ ಸೇರಲಿದ್ದು, ಎರಡು ಅಥವಾ ಮೂರು ಹೆಸರುಗಳನ್ನು ಸೂಚಿಸಬಹುದೆಂದು ನಿರೀಕ್ಷೆಯಿದೆ. ಜನವರಿ ಮುಂಚಿತವಾಗಿ ಮೊದಲ‌ ಪಟ್ಟಿ ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದರು.

ಪ್ರತಿಭಟನೆಗೆ ಸಹಕಾರ: ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಕಾವೇರಿ ನೀರಿನ ವಿಚಾರವಾಗಿ ಬಂದ್ ಹಾಗೂ ಪ್ರತಿಭಟನೆ ಕುರಿತಾಗಿ “ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ.‌ ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು. ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ.

ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಹಕ್ಕು, ಯಾವ ಪಕ್ಷದವರಿಗೂ ತೊಂದರೆ, ಅಡಚಣೆ ಮಾಡಲು ನಾವು ಮುಂದಾಗುವುದಿಲ್ಲ. ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಪಕ್ಷದವರು ಸಹ ಏನು ಮಾಡುವುದು ಎಂದು ಕೇಳಿದರು, ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಿ” ಎಂದು ಹೇಳಿದ್ದೇವೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

32 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

38 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

47 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago