BREAKING NEWS

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ; ಯಾರಿಗೆ ಯಾವ ಕ್ಷೇತ್ರ?

ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯನ್ನು ಉಳಿಸಿಕೊಂಡಿದೆ. ಮಾನ್ವಿ ಮತ್ತು ಶಿವಮೊಗ್ಗ ನಗರ ಕ್ಷೇತ್ರಗಳಿಗೆ ಮಾತ್ರ ಟಿಕೆಟ್‌ ಘೋಷಿಸಬೇಕಿದೆ.

ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 23 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿತ್ತು. ಈಗ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಒಟ್ಟು 222 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದಂತಾಗಿದೆ. ಜಗದೀಶ್‌ ಶೆಟ್ಟರ್‌ ಅವರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರಕ್ಕೆ ಮಹೇಶ್‌ ಟೆಂಗಿನಕಾಯಿಗೆ ಟಿಕೆಟ್‌ ನೀಡಿದ್ದು, ಕೃಷ್ಣರಾಜದಲ್ಲಿ ಎಸ್‌.ಎ ರಾಮದಾಸ್‌ಗೆ ಟಿಕೆಟ್‌ ಮಿಸ್‌ ಆಗಿದೆ.

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ!

  1. ನಾಗಠಾಣ: ಸಂಜೀವ್‌ ಐಹೊಳೆ
  2. ಸೇಡಂ: ರಾಜಕುಮಾರ್‌ ಪಾಟೀಲ್‌
  3. ಕೊಪ್ಪಳ: ಮಂಜುಳಾ ಅಮರೇಶ್‌
  4. ರೋಣ: ಕಳಕಪ್ಪ ಬಂಡಿ
  5. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ – ಮಹೇಶ್‌ ಟೆಂಗಿನಕಾಯಿ
  6. ಹಗರಿಬೊಮ್ಮನಹಳ್ಳಿ: ಬಿ ರಾಮಣ್ಣ
  7. ಹೆಬ್ಬಾಳ: ಕಟ್ಟ ಜಗದೀಶ್‌
  8. ಗೋವಿಂದರಾಜನಗರ: ಉಮೇಶ್‌ ಶೆಟ್ಟಿ
  9. ಮಹದೇವಪುರ: ಮಂಜುಳಾ ಅರವಿಂದ್‌ ಲಿಂಬಾವಳಿ
  10. ಕೃಷ್ಣರಾಜ: ಶ್ರೀವತ್ಸಾ

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ವಿ ಸೋಮಣ್ಣ ಅವರ ಪುತ್ರನಿಗೆ ಈ ಕ್ಷೇತ್ರದ ಟಿಕೆಟ್ ಸಿಕ್ಕಿಲ್ಲ. ಸೋಮಣ್ಣ ಅವರಿಗೆ ಚಾಮರಾಜನಗರ ಹಾಗೂ ವರುಣಾದಲ್ಲಿ ಟಿಕೆಟ್ ಕೊಡಲಾಗಿದೆ. ಆದರೆ, ಅವರ ಪುತ್ರ ಅರುಣ್ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯನ್ನು ಸೋಮಣ್ಣ ಇಟ್ಟುಕೊಂಡಿದ್ದರು. ಆದರೆ ಅವರಿಗೆ ಬದಲಾಗಿ ಮಾಜಿ ಪಾಲಿಕೆ ಸದಸ್ಯರಾಗಿರುವ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಹದೇವಪುರ ಟಿಕೆಟ್ ಕೈತಪ್ಪಿದೆ. ಆದರೆ, ಅವರ ಬದಲಾಗಿ ಅವರ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಕೈತಪ್ಪುವ ಭೀತಿಯಿಂದ ಅವರು ಪಕ್ಷೇತರ ಸ್ಪರ್ಧೆಗೆ ಸಿದ್ಧತೆ ನಡೆಸಿಕೊಂಡಿದ್ದರು. ಈ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆಗೆ ಸಭೆಯನ್ನು ಕೂಡಾ ನಡೆಸಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣರಾಜ ಕ್ಷೇತ್ರದಲ್ಲಿ ಎಸ್‌.ಎ ರಾಮದಾಸ್‌ ಬದಲಾಗಿ ಶ್ರೀವತ್ಸಾ ಅವರಿಗೆ ಟಿಕೆಟ್‌ ನೀಡಲಾಗಿದೆ. ಅದಲ್ಲದೇ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಗೋವಿಂದ ಕಾರಜೋಳ ಅವರ ಪುತ್ರನಿಗೆ ಟಿಕೆಟ್‌ ನೀಡಲಾಗಿತ್ತು. ಆದರೆ, ಈ ಬಾರಿ ಅವರಿಗೆ ಟಿಕೆಟ್‌ ಕೈತಪ್ಪಿದ್ದು, ಸಂಜೀವ್‌ ಐಹೊಳೆಗೆ ಟಿಕೆಟ್‌ ನೀಡಲಾಗಿದೆ.

ಇನ್ನೂ, ಕೊಪ್ಪಳದಲ್ಲಿ ಸಂಸದ ಸಂಗಣ್ಣ ಕರಡಿ ಹಾಗೂ ಸಿವಿ ಚಂದ್ರಶೇಖರ್‌ ನಡುವೆ ಟಿಕೆಟ್‌ ಫೈಟ್‌ ಇತ್ತು. ಆದರೆ, ಇಬ್ಬರಿಗೂ ಮಣೆಹಾಕದ ಬಿಜೆಪಿ ನಾಯಕರು ಮಂಜುಳಾ ಅಮರೇಶ್‌ ಅವರಿಗೆ ಟಿಕೆಟ್‌ ನೀಡಿದ್ದಾರೆ.

andolanait

Recent Posts

ಇನ್ನು ಮುಂದೆ ಸೌಜನ್ಯದಿಂದ ವರ್ತಿಸುವುದಿಲ್ಲ ; ಇರಾನ್‌ಗೆ ಟ್ರಂಪ್‌ನ ಕಠಿಣ ಎಚ್ಚರಿಕೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು…

7 mins ago

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…

17 mins ago

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

54 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

1 hour ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

2 hours ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago