BREAKING NEWS

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ; ಯಾರಿಗೆ ಯಾವ ಕ್ಷೇತ್ರ?

ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯನ್ನು ಉಳಿಸಿಕೊಂಡಿದೆ. ಮಾನ್ವಿ ಮತ್ತು ಶಿವಮೊಗ್ಗ ನಗರ ಕ್ಷೇತ್ರಗಳಿಗೆ ಮಾತ್ರ ಟಿಕೆಟ್‌ ಘೋಷಿಸಬೇಕಿದೆ.

ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 23 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿತ್ತು. ಈಗ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಒಟ್ಟು 222 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದಂತಾಗಿದೆ. ಜಗದೀಶ್‌ ಶೆಟ್ಟರ್‌ ಅವರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರಕ್ಕೆ ಮಹೇಶ್‌ ಟೆಂಗಿನಕಾಯಿಗೆ ಟಿಕೆಟ್‌ ನೀಡಿದ್ದು, ಕೃಷ್ಣರಾಜದಲ್ಲಿ ಎಸ್‌.ಎ ರಾಮದಾಸ್‌ಗೆ ಟಿಕೆಟ್‌ ಮಿಸ್‌ ಆಗಿದೆ.

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ!

  1. ನಾಗಠಾಣ: ಸಂಜೀವ್‌ ಐಹೊಳೆ
  2. ಸೇಡಂ: ರಾಜಕುಮಾರ್‌ ಪಾಟೀಲ್‌
  3. ಕೊಪ್ಪಳ: ಮಂಜುಳಾ ಅಮರೇಶ್‌
  4. ರೋಣ: ಕಳಕಪ್ಪ ಬಂಡಿ
  5. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ – ಮಹೇಶ್‌ ಟೆಂಗಿನಕಾಯಿ
  6. ಹಗರಿಬೊಮ್ಮನಹಳ್ಳಿ: ಬಿ ರಾಮಣ್ಣ
  7. ಹೆಬ್ಬಾಳ: ಕಟ್ಟ ಜಗದೀಶ್‌
  8. ಗೋವಿಂದರಾಜನಗರ: ಉಮೇಶ್‌ ಶೆಟ್ಟಿ
  9. ಮಹದೇವಪುರ: ಮಂಜುಳಾ ಅರವಿಂದ್‌ ಲಿಂಬಾವಳಿ
  10. ಕೃಷ್ಣರಾಜ: ಶ್ರೀವತ್ಸಾ

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ವಿ ಸೋಮಣ್ಣ ಅವರ ಪುತ್ರನಿಗೆ ಈ ಕ್ಷೇತ್ರದ ಟಿಕೆಟ್ ಸಿಕ್ಕಿಲ್ಲ. ಸೋಮಣ್ಣ ಅವರಿಗೆ ಚಾಮರಾಜನಗರ ಹಾಗೂ ವರುಣಾದಲ್ಲಿ ಟಿಕೆಟ್ ಕೊಡಲಾಗಿದೆ. ಆದರೆ, ಅವರ ಪುತ್ರ ಅರುಣ್ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯನ್ನು ಸೋಮಣ್ಣ ಇಟ್ಟುಕೊಂಡಿದ್ದರು. ಆದರೆ ಅವರಿಗೆ ಬದಲಾಗಿ ಮಾಜಿ ಪಾಲಿಕೆ ಸದಸ್ಯರಾಗಿರುವ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಹದೇವಪುರ ಟಿಕೆಟ್ ಕೈತಪ್ಪಿದೆ. ಆದರೆ, ಅವರ ಬದಲಾಗಿ ಅವರ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಕೈತಪ್ಪುವ ಭೀತಿಯಿಂದ ಅವರು ಪಕ್ಷೇತರ ಸ್ಪರ್ಧೆಗೆ ಸಿದ್ಧತೆ ನಡೆಸಿಕೊಂಡಿದ್ದರು. ಈ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆಗೆ ಸಭೆಯನ್ನು ಕೂಡಾ ನಡೆಸಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣರಾಜ ಕ್ಷೇತ್ರದಲ್ಲಿ ಎಸ್‌.ಎ ರಾಮದಾಸ್‌ ಬದಲಾಗಿ ಶ್ರೀವತ್ಸಾ ಅವರಿಗೆ ಟಿಕೆಟ್‌ ನೀಡಲಾಗಿದೆ. ಅದಲ್ಲದೇ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಗೋವಿಂದ ಕಾರಜೋಳ ಅವರ ಪುತ್ರನಿಗೆ ಟಿಕೆಟ್‌ ನೀಡಲಾಗಿತ್ತು. ಆದರೆ, ಈ ಬಾರಿ ಅವರಿಗೆ ಟಿಕೆಟ್‌ ಕೈತಪ್ಪಿದ್ದು, ಸಂಜೀವ್‌ ಐಹೊಳೆಗೆ ಟಿಕೆಟ್‌ ನೀಡಲಾಗಿದೆ.

ಇನ್ನೂ, ಕೊಪ್ಪಳದಲ್ಲಿ ಸಂಸದ ಸಂಗಣ್ಣ ಕರಡಿ ಹಾಗೂ ಸಿವಿ ಚಂದ್ರಶೇಖರ್‌ ನಡುವೆ ಟಿಕೆಟ್‌ ಫೈಟ್‌ ಇತ್ತು. ಆದರೆ, ಇಬ್ಬರಿಗೂ ಮಣೆಹಾಕದ ಬಿಜೆಪಿ ನಾಯಕರು ಮಂಜುಳಾ ಅಮರೇಶ್‌ ಅವರಿಗೆ ಟಿಕೆಟ್‌ ನೀಡಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago