BREAKING NEWS

ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು : ಬಿಜೆಪಿ ಮೇಲೆ ದೇವನೂರ ಮಹಾದೇವ ಆಕ್ರೋಶ

ಬೆಂಗಳೂರು : ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ.ಒಂದು ಎಂಜಿನ್‍ನಲ್ಲಿ ದ್ವೇಷ ತುಂಬಿಕೊಂಡಿದೆ.ಇನ್ನೊಂದು ಎಂಜಿನ್ ನುಂಗುವ ಕೆಲಸ ಮಾಡುತ್ತಿದೆ. ಎಂಜಿನ್ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರಿಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ ಎಂದರು.

ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಎಂದು ಹೇಳಿ ಅಭಿವೃದ್ಧಿಯ ಬುಡ ಅಲ್ಲಾಡಿಸುತ್ತಾರೆ. ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಕಾಂಗ್ರೆಸ್ ಏನ್ ಮಾಡಿದೆ ಎಂದು ಕೇಳುತ್ತಾರೆ. ಸಾರ್ವಜನಿಕ ಆಸ್ತಿಗಳನ್ನು ಕಾಂಗ್ರೆಸ್ ರಕ್ಷಣೆ ಮಾಡಿದೆ. ಡಬಲ್ ಎಂಜಿನ್‍ನ ಒಂದು ಎಂಜಿನ್‍ನಲ್ಲಿ ಧರ್ಮದ ದ್ವೇಷ, ಇನ್ನೊಂದು ಎಂಜಿನ್‍ನಲ್ಲಿ 40% ಕಮಿಷನ್ ಸೌಂಡ್ ಮಾಡುತ್ತಿದೆ. ಬಿಜೆಪಿ ಸರ್ಕಾರವನ್ನು ಗುಜರಿಗೆ ಹಾಕಿ ಎಂದು ಕರೆ ನೀಡಿದರು.

ಡಬಲ್ ಎಂಜಿನ್ ಸರ್ಕಾರ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಬಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್ ಎಂಜಿನ್ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್ ಎಂಜಿನ್ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಎಂದು ಪ್ರಶ್ನೆಸಿದರು.

ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‍ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಡಬಲ್ ಎಂಜಿನ್ ಸರ್ಕಾರ ಅಂತಾರೆ! ಕಾಂಗ್ರೆಸ್ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಾ ಇತ್ತು. ಬಿಜೆಪಿಯ ಈ ಡಬಲ್ ಎಂಜಿನ್ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ವರುಣಾದಲ್ಲಿ ಪ್ರಚಾರದ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು ಜನ ತರಾಟೆಗೆ ತೆಗೆದುಕೊಂಡ ವಿಷಯದ ಬಗ್ಗೆ ಮಾತನಾಡಿ, ಪ್ರತಾಪ್ ಸಿಂಹಗೆ ಮೊನ್ನೆ ವರುಣಾದಲ್ಲಿ ಜನ ಬೆವರಿಳಿಸಿದರು.. ಹಿಗ್ಗಾಮುಗ್ಗಾ ಜಾಡಿಸಿದರು.ಭಾರತ್ ಜೋಡೊ ಯಾತ್ರೆಯ ಬಳಿಕ ಕಾಂಗ್ರೆಸ್ ಚೇತರಿಕೆ ಕಾಣುತ್ತಿದೆ. ಕಾಂಗ್ರೆಸ್ ಬಲವಾಗಿ ಇಲ್ಲದ ಕಡೆ ಜೆಡಿಎಸ್‍ ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸೋಣ ಎಂದು ಕರೆ ಕೊಟ್ಟರು.

ಯಾವ ಪಕ್ಷಕ್ಕೆ ಮತ ನೀಡಬೇಕು? : ಬಹುತೇಕ ಕಾಂಗ್ರೆಸ್ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದಯೋ ಅಲ್ಲಿ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್ ಮೂರನೆ ಸ್ಥಾನದಲ್ಲಿ ಇರುವ ಕಡೆ ಜೆಡಿಎಸ್ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‍ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ, ʼಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು.ʼ ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ ಎಂದು ದೇವನೂರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

lokesh

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

41 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

1 hour ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

1 hour ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

2 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

13 hours ago