BREAKING NEWS

ಇದು ಪೂರ್ಣ ಪ್ರಮಾಣದ ಗ್ಯಾರಂಟಿ ಬಜೆಟ್| ನಮ್ಮ ಭರವಸೆಗಳು ಬಿಜೆಪಿ ಸರ್ಕಾರಕ್ಕಿಂತ ಭಿನ್ನ: ಸಿಎಂ

ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದರು.

ಬಜೆಟ್​ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಜುಲೈ 16ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಆಗಸ್ಟ್​ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್​​ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು ಎಂದರು.

ನಮ್ಮ ಭರವಸೆಗಳು ಈ ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗಿವೆ. ಅವರು ಬಡವರಿಗೆ ನೀಡುತ್ತಿದ್ದ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಹೀಗಾಗಿ ನಾವು 10 ಕೆಜಿ ಉಚಿತ ನೀಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವು. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಆದರೆ ಈ ಗ್ಯಾರಂಟಿ ಯೋಜನೆಗಳಿಂದ 1.3 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದರು.

ಸಾಲ ಜಿಡಿಪಿಯ ಶೇ. 25ರ ಒಳಗೆ ಇರಬೇಕು. ಆದರೆ ನಮ್ಮ ರಾಜ್ಯ ಸರ್ಕಾರದ ಸಾಲ ಶೇ. 23 ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago