ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದರು.
ಬಜೆಟ್ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಜುಲೈ 16ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಆಗಸ್ಟ್ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು ಎಂದರು.
ನಮ್ಮ ಭರವಸೆಗಳು ಈ ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗಿವೆ. ಅವರು ಬಡವರಿಗೆ ನೀಡುತ್ತಿದ್ದ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಹೀಗಾಗಿ ನಾವು 10 ಕೆಜಿ ಉಚಿತ ನೀಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವು. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಆದರೆ ಈ ಗ್ಯಾರಂಟಿ ಯೋಜನೆಗಳಿಂದ 1.3 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದರು.
ಸಾಲ ಜಿಡಿಪಿಯ ಶೇ. 25ರ ಒಳಗೆ ಇರಬೇಕು. ಆದರೆ ನಮ್ಮ ರಾಜ್ಯ ಸರ್ಕಾರದ ಸಾಲ ಶೇ. 23 ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…