BREAKING NEWS

ಇದು ಪೂರ್ಣ ಪ್ರಮಾಣದ ಗ್ಯಾರಂಟಿ ಬಜೆಟ್| ನಮ್ಮ ಭರವಸೆಗಳು ಬಿಜೆಪಿ ಸರ್ಕಾರಕ್ಕಿಂತ ಭಿನ್ನ: ಸಿಎಂ

ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದರು.

ಬಜೆಟ್​ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಜುಲೈ 16ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಆಗಸ್ಟ್​ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್​​ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು ಎಂದರು.

ನಮ್ಮ ಭರವಸೆಗಳು ಈ ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗಿವೆ. ಅವರು ಬಡವರಿಗೆ ನೀಡುತ್ತಿದ್ದ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಹೀಗಾಗಿ ನಾವು 10 ಕೆಜಿ ಉಚಿತ ನೀಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವು. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಆದರೆ ಈ ಗ್ಯಾರಂಟಿ ಯೋಜನೆಗಳಿಂದ 1.3 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದರು.

ಸಾಲ ಜಿಡಿಪಿಯ ಶೇ. 25ರ ಒಳಗೆ ಇರಬೇಕು. ಆದರೆ ನಮ್ಮ ರಾಜ್ಯ ಸರ್ಕಾರದ ಸಾಲ ಶೇ. 23 ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago