BREAKING NEWS

ಇದು ಸಿದ್ಧಾಂತದ ಸೋಲಲ್ಲ ವೈಯಕ್ತಿಕ ಸೋಲು ಜನಾದೇಶಕ್ಕೆ ತಲೆ ಬಾಗುತ್ತೇನೆ : ಸಿ.ಟಿ.ರವಿ

ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲಲ್ಲ ಎಂದಿದ್ದಾರೆ. ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶ ಅಂತಿಮವಾಗಿ ಸಿ.ಟಿ.ರವಿ ಸೋಲು ಎಂದು ರಿಸಲ್ಟ್ ಹೊರಬಂದ ಬಳಿಕ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ 1999ರ ಬಳಿಕ ಮೊದಲ ಬಾರಿಗೆ ಬಿಜೆಪಿ ವೈಟ್ ವಾಶ್ ಆಗಿದೆ. 1999ರಲ್ಲೂ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಆ ಬಳಿಕ ಈಗ ಮತ್ತೆ ಐದಕ್ಕೆ ಐದು ಕ್ಷೇತ್ರಗಳು ಕೈ ಪಾಲಾಗಿವೆ. ಜಿಲ್ಲೆಯಲ್ಲಿ ಬಿಜೆಪಿ ವೈಟ್ ವಾಶ್ ಫಲಿತಾಂಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೋಲು-ಗೆಲುವು ಸ್ವಾಭಾವಿಕ : ಜಿಲ್ಲೆಯ ಜನತೆ ನೀಡಿದ ಜನಾದೇಶಕ್ಕೆ ತಲೆಬಾಗುತ್ತೇನೆ. ಚುನಾವಣೆಯಲ್ಲಿ ಸೋಲು-ಗೆಲುವು ಸ್ವಾಭಾವಿಕ. ಗೆಲುವಿನಿಂದ ಬೀಗಿಲ್ಲ. ಸೋಲಿನಿಂದ ಕುಗ್ಗಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು. ಆಗಿರುವ ತಪ್ಪುಗಳನ್ನ ಸರಿಪಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದು, ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಕ್ಕ ಅಲ್ಪ ಸಮಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದು, ತಾವು ತಂದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲಿ ಎಂದು ಆಶಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಕಾರ್ಯಕರ್ತರು ಧೃತಿಗೆಡುವುದು ಬೇಡ. ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಂತು ಧೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

lokesh

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

50 mins ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

1 hour ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

2 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

3 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

3 hours ago