BREAKING NEWS

ಇದು ಸಿದ್ಧಾಂತದ ಸೋಲಲ್ಲ ವೈಯಕ್ತಿಕ ಸೋಲು ಜನಾದೇಶಕ್ಕೆ ತಲೆ ಬಾಗುತ್ತೇನೆ : ಸಿ.ಟಿ.ರವಿ

ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲಲ್ಲ ಎಂದಿದ್ದಾರೆ. ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶ ಅಂತಿಮವಾಗಿ ಸಿ.ಟಿ.ರವಿ ಸೋಲು ಎಂದು ರಿಸಲ್ಟ್ ಹೊರಬಂದ ಬಳಿಕ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ 1999ರ ಬಳಿಕ ಮೊದಲ ಬಾರಿಗೆ ಬಿಜೆಪಿ ವೈಟ್ ವಾಶ್ ಆಗಿದೆ. 1999ರಲ್ಲೂ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಆ ಬಳಿಕ ಈಗ ಮತ್ತೆ ಐದಕ್ಕೆ ಐದು ಕ್ಷೇತ್ರಗಳು ಕೈ ಪಾಲಾಗಿವೆ. ಜಿಲ್ಲೆಯಲ್ಲಿ ಬಿಜೆಪಿ ವೈಟ್ ವಾಶ್ ಫಲಿತಾಂಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೋಲು-ಗೆಲುವು ಸ್ವಾಭಾವಿಕ : ಜಿಲ್ಲೆಯ ಜನತೆ ನೀಡಿದ ಜನಾದೇಶಕ್ಕೆ ತಲೆಬಾಗುತ್ತೇನೆ. ಚುನಾವಣೆಯಲ್ಲಿ ಸೋಲು-ಗೆಲುವು ಸ್ವಾಭಾವಿಕ. ಗೆಲುವಿನಿಂದ ಬೀಗಿಲ್ಲ. ಸೋಲಿನಿಂದ ಕುಗ್ಗಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು. ಆಗಿರುವ ತಪ್ಪುಗಳನ್ನ ಸರಿಪಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದು, ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಕ್ಕ ಅಲ್ಪ ಸಮಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದು, ತಾವು ತಂದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲಿ ಎಂದು ಆಶಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಕಾರ್ಯಕರ್ತರು ಧೃತಿಗೆಡುವುದು ಬೇಡ. ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಂತು ಧೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago