BREAKING NEWS

ಇದು ನಮ್ಮ ಎರಡನೇ ಸ್ವಾತಂತ್ರ್ಯ ಸಂಗ್ರಾಮ: ಇಸ್ರೇಲ್ ಘೋಷಣೆ

ಟೆಲ್ ಅವೀವ್ : ಗಾಝಾದಲ್ಲಿ ಹಮಾಸ್ ವಿರುದ್ಧ ತಾನು ನಡೆಸುತ್ತಿರುವ ನೆಲದ ಕಾರ್ಯಾಚರಣೆ 2ನೇ ಹಂತವನ್ನು ಪ್ರವೇಶಿಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.

ರಾಜಧಾನಿ ಟೆಲ್ಅವೀವ್ನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ‘ ದೀರ್ಘ ಮತ್ತು ಕಠಿಣ ಸಂಘರ್ಷ ಇದಾಗುವ ನಿರೀಕ್ಷೆಯಿದೆ’ ಎಂದರು. ನಮ್ಮ ಮಿಲಿಟರಿ ಕಾರ್ಯಾಚರಣೆಯ ಉದ್ದೇಶ ಅತ್ಯಂತ ಸ್ಪಷ್ಟವಾಗಿದೆ. ಹಮಾಸ್ನ ಮಿಲಿಟರಿ ಮತ್ತು ಆಡಳಿತ ಸಾಮರ್ಥ್ಯವನ್ನು ನಾಶಮಾಡುವುದು ಮತ್ತು ಹಮಾಸ್ ಒತ್ತೆಯಾಳಾಗಿ ಇರಿಸಿಕೊಂಡವರನ್ನು ಮರಳಿ ಮನೆಗೆ ಕರೆತರುವುದಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಗಾಝಾ ಪಟ್ಟಿಯೊಳಗೆ ನಡೆಯುವ ಯುದ್ಧ ಸುದೀರ್ಘ ಮತ್ತು ಕಠಿಣವಾಗಿರಲಿದೆ ಮತ್ತು ನಾವು ಇದಕ್ಕೆ ಸಿದ್ಧವಿದ್ದೇವೆ. ಇದು ನಮ್ಮ ಎರಡನೇ ಸ್ವಾತಂತ್ರ್ಯ ಸಂಗ್ರಾಮ. ನಮ್ಮ ತಾಯ್ನಾಡಿನ ರಕ್ಷಣೆಗಾಗಿ ನಾವು ಹೋರಾಡುತ್ತೇವೆ. ನಾವು ಹಿಂದೆ ಸರಿಯುವ ಮಾತೇ ಇಲ್ಲ. ವಾಯು ಮತ್ತು ನೆಲದ ಮೇಲಿನ ದಾಳಿಯ ಮೂಲಕ ಭೂಮಿಯ ಮೇಲಿರುವ ಮತ್ತು ನೆಲದಡಿ ಇರುವ ಶತ್ರುಗಳನ್ನು ನಾಶ ಮಾಡದೆ ಬಿಡುವುದಿಲ್ಲ. ನಾವು ಹೋರಾಡುತ್ತೇವೆ ಮತ್ತು ಗೆಲ್ಲುತ್ತೇವೆ’ ಎಂದರು.

ಇಸ್ರೇಲ್-ಹಮಾಸ್ ಯುದ್ಧಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಗಳು:

* ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಸೋಮವಾರ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ನಡೆಯುವ ನಿರೀಕ್ಷೆ.

* ಯುದ್ಧದಿಂದ ಜರ್ಝರಿತಗೊಂಡಿರುವ ಗಾಝಾಕ್ಕೆ ತುರ್ತು ಮಾನವೀಯ ನೆರವನ್ನು ಒದಗಿಸುವ ಪ್ರಾಮುಖ್ಯತೆಯನ್ನು ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನುವೆಲ್ ಮ್ಯಾಕ್ರನ್ ಒತ್ತಿ ಹೇಳಿದ್ದಾರೆ.

* ಇಸ್ರೇಲ್-ಹಮಾಸ್ ನಡುವಿನ ಯುದ್ಧದಿಂದಾಗಿ ಪಶ್ಚಿಮ ಏಷ್ಯಾದ ಪರಿಸ್ಥಿತಿ ಅಸ್ಥಿರ ಮತ್ತು ಚಿಂತಾಜನಕವಾಗಿದೆ. ಎರಡು ರಾಷ್ಟ್ರ ಸೂತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿದೆ ಎಂದು ಲೆಬನಾನ್ ಹೇಳಿದೆ.

* ಅಕ್ಟೋಬರ್ 7ರ ಹಮಾಸ್ ದಾಳಿಯ ಬಗ್ಗೆ ದೇಶದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡುವಲ್ಲಿ ವಿಫಲವಾಗಿದೆ ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಗುಪ್ತಚರ ದಳದ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

andolanait

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

2 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

22 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

23 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

23 hours ago