BREAKING NEWS

ಮೈಸೂರಲ್ಲಿ ಯದುವಂಶಸ್ಥರ ದತ್ತು ಪುತ್ರ v/s ಸಾಮಾನ್ಯ ಪ್ರಜೆ ನಡುವೆ ಚುನಾವಣೆ: ಎಂ. ಲಕ್ಷ್ಮಣ್‌

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯದುವಂಶಸ್ಥರ ದತ್ತುಪುತ್ರ ಹಾಗೂ ಸಾಮಾನ್ಯ ಪ್ರಜೆಯ ನಡುವೆ ಚುನಾವಣೆ ನಡೆಯಲಿದೆ ಎಂದು ಎಂ. ಲಕ್ಷ್ಮಣ್‌ ಹೇಳಿದರು.

ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ದೇಶದಲ್ಲೇ ಮೊದಲ ಬಾರಿಗೆ ಎಲ್ಲಾ ಸಮುದಾಯಗಳಿಗೆ ಮೀಸಲಾತಿ ನೀಡಿ, ನ್ಯಾಯ ಸಿಗಲು ಶ್ರಮಿಸಿದ್ದು ಮೈಸೂರಿನ ರಾಜಮನೆತನದ ನಾಲ್ವಡಿ ಶ್ರೀ ಅವರು, ಆದರೆ ಇಂದು ಅದೇ ಮೀಸಲಾತಿ ರದ್ದುಗೊಳಿಸಿ, ಜನ ಸಾಮಾನ್ಯರನ್ನು ಶೋಷಿತರನ್ನಾಗಿ ಮಾಡುವ ಪಕ್ಷಕ್ಕೆ ಯದುವೀರ್‌ ಸೇರಿರುವುದು ಬೇಸರದ ಸಂಗತಿ. ರಾಜರು ನಮ್ಮ ಪಕ್ಷವನ್ನು ಅಪ್ರೋಚ್‌ ಮಾಡಿದ್ದರೇ ಖಂಡಿತ ಟಿಕೆಟ್‌ ಸಿಗುತ್ತಿತ್ತು ಎಂದರು.

ಮುಂದುವರಿದು, ಜನ ಸಾಮಾನ್ಯರ ಮನೆ ಕಾಯುವವನು ನಾನು. ಇನ್ನೊಬ್ಬರ ಮನೆ ಮುಂದೆ ಹೋಗಿ ಅವರ ಮನೆ ಕಾಯುವ ಕಾಯಕ ಬೇಕಾ? ಇದನ್ನು ಮತದಾರರು ಚಿಂತಿಸಬೇಕಾಗಿದೆ ಎಂದು ಮನವಿ ಮಾಡಿದರು.

ಪ್ರತಾಪ್ ಸಿಂಹ ಹತಾಶರಾಗಿದ್ದಾರೆ:

ವಯಕ್ತಿಕವಾಗಿ ನನಗೆ ಪ್ರತಾಪ್‌ ಸಿಂಹ ಅವರ ಮೇಲೆ ಯಾವುದೇ ದ್ವೇಷವಿಲ್ಲ. ಹೆಚ್ಚು ಸುಳ್ಳು ಹೇಳುವ ಪ್ರತಾಪ್‌ ಅವರನ್ನು ನಾನು ರಾಜಕೀಯವಾಗಿ ವಿರೋಧಿಸುತ್ತೇನೆ ಎಂದರು.

ಈ ಬಾರಿಯೂ ಪ್ರತಾಪ್ ಸಿಂಹಗೆ ಟಿಕೆಟ್ ಸಿಗುತ್ತೆ ಅಂತ ಅಂದುಕೊಂಡಿದ್ದೆ. ಆದ್ರೆ ಪ್ರತಾಪ್ ಸಿಂಹ ಅವರಾಗಿ ಅವರೇ ಔಟ್ ಆಗಿಬಿಟ್ರು. ಗ್ರಾ.ಪಂ ಚುನಾವಣೆಯನ್ನು ಗೆಲ್ಲದವನ ಬಳಿ ಮಾತನಾಡುವುದಿಲ್ಲ ಎಂದಿದ್ದಿರಿ ಈಗ ನಮಗೆ ಟಿಕೆಟ್‌ ಇಲ್ಲ ಎಂದು ವ್ಯಂಗ್ಯವಾಡಿದರು.

ಮೋದಿ ಹೆಸರಿನಿಂದ ಎಲ್ಲಾ ಕೆಲಸ ಮಾಡಿದ್ದಾಗಿ ಹೇಳುತ್ತಿದ್ದ ಅವರು ಟಿಕೆಟ್‌ ಮಿಸ್‌ ಆದ ಬಳಿಕ ನಾನು, ನಾನು ಎನ್ನುತ್ತಿದ್ದಾರೆ. ಪಾಪಾ ಹತಾಶರಾದ ಪ್ರತಾಪ್‌ ಸಿಂಹ ಏನೇನೋ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮಾತನಾಡದೇ ಇರುವಂತೆ ಹೈಕೋರ್ಟ್‌ ನಿಂದ ಸ್ಟೇ ತಂದಿದ್ದಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಕಿಚಾಯಿಸಿದರು.

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದು ಯಾಕೆ? ಕಾರಣ ಏನು ಅಂತ ಬಿಜೆಪಿಯವರು ಹೇಳಬೇಕು. ಇಲ್ಲಾ ಏನು ಕಾರಣದಿಂದಾಗಿ ಟಿಕೆಟ್‌ ಕೈ ತಪ್ಪಿ ಹೋಯಿತು ಎಂಬ ಬಗ್ಗೆ ಸ್ವತಃ ಸಿಂಹ ಅವರೇ ವಿವರಣೆ ನೀಡಬೇಕು ಎಂದು ಆಗ್ರಹಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪ್ರಭಾವ ಕುರಿತಂತೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಈ ಕ್ಷೇತ್ರದಲ್ಲಿ ಮನೆಯೊಂದು ಆರು ಬಾಗಿಲು ಎಂದಾಗಿದೆ. ಇನ್ನು ಜೆಡಿಎಸ್‌ ತನ್ನ ಅಸ್ಥತ್ವವನ್ನೇ ಕಳೆದುಕೊಂಡಿದೆ. ಜೆಡಿಎಸ್‌ಗೆ ಬಿಜೆಪಿ ನಂಬಿಸಿ ಕತ್ತು ಕುಯ್ದಿದಿದೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಜೆಪಿಗೆ ನಂಬಿಕೆಯಿಲ್ಲ. ಮತ್ತು ಒಕ್ಕಲಿಗರನ್ನು ಗಣನೀಯವಾಗಿ ಕಡೆಗಣಿಸಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

9 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

54 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

3 hours ago