BREAKING NEWS

ಮೈಸೂರಲ್ಲಿ ಯದುವಂಶಸ್ಥರ ದತ್ತು ಪುತ್ರ v/s ಸಾಮಾನ್ಯ ಪ್ರಜೆ ನಡುವೆ ಚುನಾವಣೆ: ಎಂ. ಲಕ್ಷ್ಮಣ್‌

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯದುವಂಶಸ್ಥರ ದತ್ತುಪುತ್ರ ಹಾಗೂ ಸಾಮಾನ್ಯ ಪ್ರಜೆಯ ನಡುವೆ ಚುನಾವಣೆ ನಡೆಯಲಿದೆ ಎಂದು ಎಂ. ಲಕ್ಷ್ಮಣ್‌ ಹೇಳಿದರು.

ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ದೇಶದಲ್ಲೇ ಮೊದಲ ಬಾರಿಗೆ ಎಲ್ಲಾ ಸಮುದಾಯಗಳಿಗೆ ಮೀಸಲಾತಿ ನೀಡಿ, ನ್ಯಾಯ ಸಿಗಲು ಶ್ರಮಿಸಿದ್ದು ಮೈಸೂರಿನ ರಾಜಮನೆತನದ ನಾಲ್ವಡಿ ಶ್ರೀ ಅವರು, ಆದರೆ ಇಂದು ಅದೇ ಮೀಸಲಾತಿ ರದ್ದುಗೊಳಿಸಿ, ಜನ ಸಾಮಾನ್ಯರನ್ನು ಶೋಷಿತರನ್ನಾಗಿ ಮಾಡುವ ಪಕ್ಷಕ್ಕೆ ಯದುವೀರ್‌ ಸೇರಿರುವುದು ಬೇಸರದ ಸಂಗತಿ. ರಾಜರು ನಮ್ಮ ಪಕ್ಷವನ್ನು ಅಪ್ರೋಚ್‌ ಮಾಡಿದ್ದರೇ ಖಂಡಿತ ಟಿಕೆಟ್‌ ಸಿಗುತ್ತಿತ್ತು ಎಂದರು.

ಮುಂದುವರಿದು, ಜನ ಸಾಮಾನ್ಯರ ಮನೆ ಕಾಯುವವನು ನಾನು. ಇನ್ನೊಬ್ಬರ ಮನೆ ಮುಂದೆ ಹೋಗಿ ಅವರ ಮನೆ ಕಾಯುವ ಕಾಯಕ ಬೇಕಾ? ಇದನ್ನು ಮತದಾರರು ಚಿಂತಿಸಬೇಕಾಗಿದೆ ಎಂದು ಮನವಿ ಮಾಡಿದರು.

ಪ್ರತಾಪ್ ಸಿಂಹ ಹತಾಶರಾಗಿದ್ದಾರೆ:

ವಯಕ್ತಿಕವಾಗಿ ನನಗೆ ಪ್ರತಾಪ್‌ ಸಿಂಹ ಅವರ ಮೇಲೆ ಯಾವುದೇ ದ್ವೇಷವಿಲ್ಲ. ಹೆಚ್ಚು ಸುಳ್ಳು ಹೇಳುವ ಪ್ರತಾಪ್‌ ಅವರನ್ನು ನಾನು ರಾಜಕೀಯವಾಗಿ ವಿರೋಧಿಸುತ್ತೇನೆ ಎಂದರು.

ಈ ಬಾರಿಯೂ ಪ್ರತಾಪ್ ಸಿಂಹಗೆ ಟಿಕೆಟ್ ಸಿಗುತ್ತೆ ಅಂತ ಅಂದುಕೊಂಡಿದ್ದೆ. ಆದ್ರೆ ಪ್ರತಾಪ್ ಸಿಂಹ ಅವರಾಗಿ ಅವರೇ ಔಟ್ ಆಗಿಬಿಟ್ರು. ಗ್ರಾ.ಪಂ ಚುನಾವಣೆಯನ್ನು ಗೆಲ್ಲದವನ ಬಳಿ ಮಾತನಾಡುವುದಿಲ್ಲ ಎಂದಿದ್ದಿರಿ ಈಗ ನಮಗೆ ಟಿಕೆಟ್‌ ಇಲ್ಲ ಎಂದು ವ್ಯಂಗ್ಯವಾಡಿದರು.

ಮೋದಿ ಹೆಸರಿನಿಂದ ಎಲ್ಲಾ ಕೆಲಸ ಮಾಡಿದ್ದಾಗಿ ಹೇಳುತ್ತಿದ್ದ ಅವರು ಟಿಕೆಟ್‌ ಮಿಸ್‌ ಆದ ಬಳಿಕ ನಾನು, ನಾನು ಎನ್ನುತ್ತಿದ್ದಾರೆ. ಪಾಪಾ ಹತಾಶರಾದ ಪ್ರತಾಪ್‌ ಸಿಂಹ ಏನೇನೋ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮಾತನಾಡದೇ ಇರುವಂತೆ ಹೈಕೋರ್ಟ್‌ ನಿಂದ ಸ್ಟೇ ತಂದಿದ್ದಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಕಿಚಾಯಿಸಿದರು.

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದು ಯಾಕೆ? ಕಾರಣ ಏನು ಅಂತ ಬಿಜೆಪಿಯವರು ಹೇಳಬೇಕು. ಇಲ್ಲಾ ಏನು ಕಾರಣದಿಂದಾಗಿ ಟಿಕೆಟ್‌ ಕೈ ತಪ್ಪಿ ಹೋಯಿತು ಎಂಬ ಬಗ್ಗೆ ಸ್ವತಃ ಸಿಂಹ ಅವರೇ ವಿವರಣೆ ನೀಡಬೇಕು ಎಂದು ಆಗ್ರಹಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪ್ರಭಾವ ಕುರಿತಂತೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಈ ಕ್ಷೇತ್ರದಲ್ಲಿ ಮನೆಯೊಂದು ಆರು ಬಾಗಿಲು ಎಂದಾಗಿದೆ. ಇನ್ನು ಜೆಡಿಎಸ್‌ ತನ್ನ ಅಸ್ಥತ್ವವನ್ನೇ ಕಳೆದುಕೊಂಡಿದೆ. ಜೆಡಿಎಸ್‌ಗೆ ಬಿಜೆಪಿ ನಂಬಿಸಿ ಕತ್ತು ಕುಯ್ದಿದಿದೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಜೆಪಿಗೆ ನಂಬಿಕೆಯಿಲ್ಲ. ಮತ್ತು ಒಕ್ಕಲಿಗರನ್ನು ಗಣನೀಯವಾಗಿ ಕಡೆಗಣಿಸಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

10 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

24 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

24 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

24 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

24 hours ago