BREAKING NEWS

ಒಂದು ವೇಳೆ ಕವಚ್‌ ಅಳವಡಿಸಿದ್ದರೂ ಈ ದುರಂತವನ್ನು ತಪ್ಪಿಸಲು ಆಗುತ್ತಿರಲಿಲ್ಲ : ಅಪಘಾತಕ್ಕೆ ಕಾರಣ ತಿಳಿಸಿದ ರೈಲು ಮಂಡಳಿ ಸದಸ್ಯೆ ಜಯ ವರ್ಮ ಸಿನ್ಹಾ

ನವದೆಹಲಿ : ಅಪಘಾತ ನಡೆದಮಾರ್ಗದಲ್ಲಿ ಒಂದು ವೇಳೆ ಕವಚ್‌ ಸಕ್ರಿಯವಾಗಿದ್ದರೂ ಮೂರು ರೈಲು ದುರಂತವನ್ನು ತಪ್ಪಿಸಲು ಸಾಧ್ಯವಿರಲಿಲ್ಲ ಎಂದು ರೈಲು ಮಂಡಳಿಯ ಸದಸ್ಯೆ ಜಯ ವರ್ಮ ಸಿನ್ಹಾ ಹೇಳಿದ್ದಾರೆ.
ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಮಾರ್ಗದಲ್ಲಿ ಕವಚ್‌ ವ್ಯವಸ್ಥೆ ಇರಲಿಲ್ಲ ಎಂಬ ಆರೋಪ ಸಂಬಂಧಿಸಿದಂತೆ ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ ಸದಸ್ಯೆ ಜಯ ವರ್ಮ ಸಿನ್ಹಾ ಮಾತನಾಡಿ, ವೇಗವಾಗಿ ಚಲಿಸುವ ವಾಹನದ ಮುಂದೆ ಇದ್ದಕ್ಕಿದ್ದಂತೆ ಅಡಚಣೆ ಸೃಷ್ಟಿಯಾದರೆ ಪ್ರಪಂಚದ ಯಾವುದೇ ತಂತ್ರಜ್ಞಾನವು ಆ ಅಪಘಾತವನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರಾಥಮಿಕ ತನಿಖೆಯಲ್ಲಿ ಸಿಗ್ನಲಿಂಗ್‌ನಲ್ಲಿ ದೋಷ ಪತ್ತೆಯಾಗಿರುವುದು ತಿಳಿದು ಬಂದಿದೆ. ರೈಲ್ವೇ ಸುರಕ್ಷತಾ ಆಯುಕ್ತರ ವಿವರವಾದ ವರದಿಗಾಗಿ ನಾವು ಇನ್ನೂ ಕಾಯುತ್ತಿದ್ದೇವೆ ಎಂದು ಹೇಳಿದರು.

ಗೂಡ್ಸ್‌ ರೈಲು ಹಳಿ ತಪ್ಪಿರಲಿಲ್ಲ. ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ ಬೋಗಿಗಳು ಇನ್ನೊಂದು ಮುಖ್ಯ ಹಳಿ ಮೇಲೆ ಬಿದ್ದ ಪರಿಣಾಮ ಗರಿಷ್ಠ ಮಟ್ಟದ ಸಾವು ನೋವು ಸಂಭವಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಬೋಗಿಗಳು ಗಂಟೆಗೆ 126 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ ಎಂದು ತಿಳಿಸಿದರು.

ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಮಯದಲ್ಲಿ ಉಂಟಾದ ಬದಲಾವಣೆಯಿಂದ ಅಪಘಾತ ಸಂಭವಿಸಿರುವುದು ತಿಳಿದು ಬಂದಿದೆ. ಈ ಬದಲಾವಣೆಯನ್ನು ಯಾರು ಮಾಡಿದ್ದಾರೆ ಮತ್ತು ಅದು ಹೇಗೆ ಸಂಭವಿಸಿತು ಎಂಬುದನ್ನು ಸರಿಯಾದ ತನಿಖೆಯ ನಂತರ ಕಂಡುಹಿಡಿಯಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಅಪಘಾತ ಹೇಗಾಯಿತು ? : ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ 4 ಹಳಿಗಳು ಇವೆ. ಈ ಪೈಕಿ ಎರಡು ಮುಖ್ಯ ಅಥವಾ ಮೇನ್‌ ಹಳಿಗಳು ಆಗಿದ್ದರೆ ಇನ್ನು ಎರಡು ಲೂಪ್‌ ಹಳಿಗಳು. ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದೇ ಇರಲು ಗೂಡ್ಸ್‌ ರೈಲುಗಳನ್ನು ನಿಲ್ದಾಣದ ಲೂಪ್‌ ಲೈನಿನಲ್ಲಿ ನಿಲ್ಲಿಸಿರುತ್ತಾರೆ. ಅದೇ ರೀತಿಯಾಗಿ ಒಂದು ಹಳಿಯಲ್ಲಿ ಗೂಡ್ಸ್‌ ರೈಲನ್ನು ನಿಲ್ಲಿಸಲಾಗಿತ್ತು. ಸಂಜೆಯ ವೇಳೆ ವೇಗವಾಗಿ ಬರುತ್ತಿದ್ದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ಹಳಿ ತಪ್ಪಿದೆ. ಈ ರೈಲು ಹಳಿ ತಪ್ಪುವ ಸಮಯದಲ್ಲೇ ಇನ್ನೊಂದು ಕಡೆಯಿಂದ ಬೆಂಗಳೂರಿನಿಂದ ಹೌರಾಗೆ ಹೊರಟಿದ್ದ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಬಂದಿದೆ. ಹಳಿ ತಪ್ಪಿದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ಯಶವಂತಪುರದಿಂದ ಹೊರಟಿದ್ದ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

16 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

18 hours ago