BREAKING NEWS

ಒಂದು ವೇಳೆ ಕವಚ್‌ ಅಳವಡಿಸಿದ್ದರೂ ಈ ದುರಂತವನ್ನು ತಪ್ಪಿಸಲು ಆಗುತ್ತಿರಲಿಲ್ಲ : ಅಪಘಾತಕ್ಕೆ ಕಾರಣ ತಿಳಿಸಿದ ರೈಲು ಮಂಡಳಿ ಸದಸ್ಯೆ ಜಯ ವರ್ಮ ಸಿನ್ಹಾ

ನವದೆಹಲಿ : ಅಪಘಾತ ನಡೆದಮಾರ್ಗದಲ್ಲಿ ಒಂದು ವೇಳೆ ಕವಚ್‌ ಸಕ್ರಿಯವಾಗಿದ್ದರೂ ಮೂರು ರೈಲು ದುರಂತವನ್ನು ತಪ್ಪಿಸಲು ಸಾಧ್ಯವಿರಲಿಲ್ಲ ಎಂದು ರೈಲು ಮಂಡಳಿಯ ಸದಸ್ಯೆ ಜಯ ವರ್ಮ ಸಿನ್ಹಾ ಹೇಳಿದ್ದಾರೆ.
ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಮಾರ್ಗದಲ್ಲಿ ಕವಚ್‌ ವ್ಯವಸ್ಥೆ ಇರಲಿಲ್ಲ ಎಂಬ ಆರೋಪ ಸಂಬಂಧಿಸಿದಂತೆ ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ ಸದಸ್ಯೆ ಜಯ ವರ್ಮ ಸಿನ್ಹಾ ಮಾತನಾಡಿ, ವೇಗವಾಗಿ ಚಲಿಸುವ ವಾಹನದ ಮುಂದೆ ಇದ್ದಕ್ಕಿದ್ದಂತೆ ಅಡಚಣೆ ಸೃಷ್ಟಿಯಾದರೆ ಪ್ರಪಂಚದ ಯಾವುದೇ ತಂತ್ರಜ್ಞಾನವು ಆ ಅಪಘಾತವನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರಾಥಮಿಕ ತನಿಖೆಯಲ್ಲಿ ಸಿಗ್ನಲಿಂಗ್‌ನಲ್ಲಿ ದೋಷ ಪತ್ತೆಯಾಗಿರುವುದು ತಿಳಿದು ಬಂದಿದೆ. ರೈಲ್ವೇ ಸುರಕ್ಷತಾ ಆಯುಕ್ತರ ವಿವರವಾದ ವರದಿಗಾಗಿ ನಾವು ಇನ್ನೂ ಕಾಯುತ್ತಿದ್ದೇವೆ ಎಂದು ಹೇಳಿದರು.

ಗೂಡ್ಸ್‌ ರೈಲು ಹಳಿ ತಪ್ಪಿರಲಿಲ್ಲ. ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ ಬೋಗಿಗಳು ಇನ್ನೊಂದು ಮುಖ್ಯ ಹಳಿ ಮೇಲೆ ಬಿದ್ದ ಪರಿಣಾಮ ಗರಿಷ್ಠ ಮಟ್ಟದ ಸಾವು ನೋವು ಸಂಭವಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಬೋಗಿಗಳು ಗಂಟೆಗೆ 126 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ ಎಂದು ತಿಳಿಸಿದರು.

ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಮಯದಲ್ಲಿ ಉಂಟಾದ ಬದಲಾವಣೆಯಿಂದ ಅಪಘಾತ ಸಂಭವಿಸಿರುವುದು ತಿಳಿದು ಬಂದಿದೆ. ಈ ಬದಲಾವಣೆಯನ್ನು ಯಾರು ಮಾಡಿದ್ದಾರೆ ಮತ್ತು ಅದು ಹೇಗೆ ಸಂಭವಿಸಿತು ಎಂಬುದನ್ನು ಸರಿಯಾದ ತನಿಖೆಯ ನಂತರ ಕಂಡುಹಿಡಿಯಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಅಪಘಾತ ಹೇಗಾಯಿತು ? : ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ 4 ಹಳಿಗಳು ಇವೆ. ಈ ಪೈಕಿ ಎರಡು ಮುಖ್ಯ ಅಥವಾ ಮೇನ್‌ ಹಳಿಗಳು ಆಗಿದ್ದರೆ ಇನ್ನು ಎರಡು ಲೂಪ್‌ ಹಳಿಗಳು. ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದೇ ಇರಲು ಗೂಡ್ಸ್‌ ರೈಲುಗಳನ್ನು ನಿಲ್ದಾಣದ ಲೂಪ್‌ ಲೈನಿನಲ್ಲಿ ನಿಲ್ಲಿಸಿರುತ್ತಾರೆ. ಅದೇ ರೀತಿಯಾಗಿ ಒಂದು ಹಳಿಯಲ್ಲಿ ಗೂಡ್ಸ್‌ ರೈಲನ್ನು ನಿಲ್ಲಿಸಲಾಗಿತ್ತು. ಸಂಜೆಯ ವೇಳೆ ವೇಗವಾಗಿ ಬರುತ್ತಿದ್ದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ಹಳಿ ತಪ್ಪಿದೆ. ಈ ರೈಲು ಹಳಿ ತಪ್ಪುವ ಸಮಯದಲ್ಲೇ ಇನ್ನೊಂದು ಕಡೆಯಿಂದ ಬೆಂಗಳೂರಿನಿಂದ ಹೌರಾಗೆ ಹೊರಟಿದ್ದ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಬಂದಿದೆ. ಹಳಿ ತಪ್ಪಿದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ಯಶವಂತಪುರದಿಂದ ಹೊರಟಿದ್ದ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ.

lokesh

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

3 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

6 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

7 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

8 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

8 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

8 hours ago