BREAKING NEWS

ಜನರನ್ನು ಒಡೆದು ಆಳುವವರೇ ದೇಶ ವಿರೋಧಿಗಳು: ಸೋನಿಯಾ ಗಾಂಧಿ

ನವದೆಹಲಿ:‘ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಜನರನ್ನು ಒಡೆದು ಆಳುತ್ತಿರುವವರು, ಜನರನ್ನು ಪರಸ್ಪರ ಎತ್ತಿಕಟ್ಟುವಲ್ಲಿ ತೊಡಗಿರುವವರೇ ನಿಜವಾದ ‘ದೇಶ ವಿರೋಧಿ’ಗಳು’ ಎಂದು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಶುಕ್ರವಾರ ಹೇಳಿದ್ದಾರೆ.

‘ಧರ್ಮ, ಭಾಷೆ, ಜಾತಿ ಹಾಗೂ ಲಿಂಗದ ಆಧಾರದ ಮೇಲೆ ಜನರ ನಡುವೆ ಒಡಕು ಮೂಡಿಸಲು ಯತ್ನಿಸಲಾಗುತ್ತಿದೆ. ಆದರೆ, ಜನರು ನೀಡಿರುವ ಅಧಿಕಾರವನ್ನು ಆಡಳಿತ ನಡೆಸಲು ಹಾಗೂ ಕರ್ತವ್ಯ ನಿಭಾಯಿಸಲು ಬಳಕೆ ಮಾಡಿದಾಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಇಂಗ್ಲಿಷ್‌ ನಿಯತಕಾಲಿಕ ‘ದಿ ಟೆಲಿಗ್ರಾಫ್‌’ನಲ್ಲಿ ಲೇಖನ ಬರೆದಿರುವ ಅವರು, ‘ಸಂವಿಧಾನದ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ದಾಳಿಯನ್ನು ತಡೆಯಲು ದೇಶದ ಜನತೆ ಕಾರ್ಯಪ್ರವೃತ್ತರಾಗಬೇಕು’ ಎಂದಿದ್ದಾರೆ.

‘ಕೇಂದ್ರ ಸರ್ಕಾರವು ಸಂವಿಧಾನದಡಿ ಸ್ಥಾಪಿತವಾಗಿರುವ ಸಂಸ್ಥೆಗಳನ್ನು ದುರ್ಬಳಕೆ ಹಾಗೂ ನಾಶ ಮಾಡುವ ಕಾರ್ಯದಲ್ಲಿ ತೊಡಗಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯ ಸೇರಿದಂತೆ ಸಂವಿಧಾನದ ಅಡಿಪಾಯಗಳನ್ನು ದುರ್ಬಲಗೊಳಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

‘ದೇಶ ಈಗ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದೆ. ರಾಜಕೀಯ ಪಕ್ಷಗಳಾಗಿ, ಯೂನಿಯನ್‌ಗಳು, ಸಂಘ–ಸಂಸ್ಥೆಗಳು, ನಾಗರಿಕ ಸಂಘಟನೆಗಳಾಗಿ ಅಥವಾ ವೈಯಕ್ತಿಕ ಮಟ್ಟದಲ್ಲಾದರೂ ಸರಿ, ಎಲ್ಲರೂ ತಮ್ಮ ಪಾಲಿನ ಜವಾಬ್ದಾರಿಯನ್ನು ನಿರ್ಹಹಿಸಬೇಕು. ಅಂಬೇಡ್ಕರ್‌ ಅವರ ಜೀವನ ಹಾಗೂ ಅವರ ಹೋರಾಟವೇ ನಮಗೆ ಪಾಠ ಹಾಗೂ ದಾರಿ ದೀಪ’ ಎಂದೂ ಅವರು ಲೇಖನದಲ್ಲಿ ಪ್ರತಿಪಾದಿಸಿದ್ದಾರೆ.

‘ಭಿನ್ನಾಭಿಪ್ರಾಯ ಮತ್ತು ಆರೋಗ್ಯಕರ ಚರ್ಚೆಗಳು ಇರಬೇಕು. ಆದರೆ, ಅಂತಿಮವಾಗಿ ದೇಶದ ಹಿತಕ್ಕಾಗಿ ಎಲ್ಲರೂ ಶ್ರಮಿಸಬೇಕು ಎಂಬುದೆ ನಮಗೆ ಮೊದಲ ಪಾಠವಾಗಬೇಕು. ಭಾರತ ಸ್ವಾತಂತ್ರ್ಯ ಸಂಗ್ರಾಮವನ್ನು ಗಮನಿಸಿದಾಗ, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರೂ, ಅಂಬೇಡ್ಕರ್‌, ಸರ್ದಾರ ವಲ್ಲಭಭಾಯಿ ಪಟೇಲ್ ಹಾಗೂ ಇತರ ನಾಯಕರ ನಡುವೆ ಭಾರಿ ಭಿನ್ನಾಭಿಪ್ರಾಯಗಳಿದ್ದವು ಎಂಬುದು ತಿಳಿಯುತ್ತದೆ’ ಎಂದಿದ್ದಾರೆ.

‘ಆದರೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹಾನ್‌ ವ್ಯಕ್ತಿಗಳು ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಏಕೈಕ ಉದ್ದೇಶ ಸಾಧನೆಗಾಗಿ ದುಡಿದರು ಎಂಬುದೂ ತಿಳಿಯುತ್ತದೆ’ ಎಂದಿರುವ ಅವರು, ‘ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಅಂಬೇಡ್ಕರ್‌ ಅವರ ಕಾರ್ಯನಿರ್ವಹಣೆಯೇ ಇಂಥ ಆದರ್ಶಮಯ ತತ್ವಕ್ಕೆ ನಿದರ್ಶನ’ ಎಂದು ಹೇಳಿದ್ದಾರೆ.

**

‘ಅಂಬೇಡ್ಕರ್ ಮಾತುಗಳ ಅವಹೇಳನ’

‘ಸಂವಿಧಾನ ಕರಡು ರಚನಾ ಸಮಿತಿ ಸಭೆಯಲ್ಲಿ ಕೊನೆಯ ಭಾಷಣ ಮಾಡಿದ ಅಂಬೇಡ್ಕರ್‌, ಜಾತಿ ಪದ್ಧತಿಯು ಸಮಾಜದಲ್ಲಿನ ಭ್ರಾತೃತ್ವದ ಬೇರುಗಳನ್ನೇ ನಾಶ ಮಾಡುತ್ತದೆ. ಇಂಥ ವ್ಯವಸ್ಥೆಯೇ ದೇಶ ವಿರೋಧಿ ಎಂದು ಹೇಳಿದ್ದರು. ಈಗ ಅಧಿಕಾರದಲ್ಲಿ ಇರುವವರು ಅಂಬೇಡ್ಕರ್‌ ಅವರ ಈ ಮಾತುಗಳನ್ನು ಅವಹೇಳನ ಮಾಡುತ್ತಿದ್ದಾರೆ’ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

‘ಜಾತಿ ಪದ್ಧತಿಯು ನಮ್ಮಲ್ಲಿ ಪ್ರತ್ಯೇಕತೆಗೆ ಕಾರಣವಾಗುತ್ತದೆ. ಮತ್ಸರ ಹುಟ್ಟಿಸುತ್ತದೆ. ಕೊನೆಗೆ ಭಾರತೀಯರನ್ನು ಇದು ವಿಭಜನೆ ಮಾಡುತ್ತದೆ ಎಂದು ಅಂಬೇಡ್ಕರ್‌ ವಿವರಿಸಿದ್ದರು’ ಎಂದು ಲೇಖನದಲ್ಲಿ ಹೇಳಿದ್ದಾರೆ.

‘ಭಾರತೀಯರಲ್ಲಿ ಸಹೋದತ್ವ ಬೆಳೆಸಬೇಕು ಎಂಬುದು ಅಂಬೇಡ್ಕರ್‌ ಅವರಿಂದ ನಾವು ಕಲಿಯಬೇಕಾದ ಎರಡನೇ ಪಾಠವಾದರೆ, ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಹೋರಾಡಬೇಕು ಎಂಬುದು ಮೂರನೇ ಪಾಠ’ ಎಂದು ವಿವರಿಸಿದ್ದಾರೆ.

* ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮೀಸಲಾತಿ ವ್ಯವಸ್ಥೆಗೆ ಅಪಾಯ ಒಡ್ಡುತ್ತಿದೆ. ಪರಿಶಿಷ್ಟರು, ಆದಿವಾಸಿಗಳು, ಇತರೆ ಹಿಂದುಳಿದ ವರ್ಗಗಳ ಜನರು ಬಾಧಿತರಾಗುತ್ತಿದ್ದಾರೆ

* ಅಂಬೇಡ್ಕರ್‌ ಜೀವನ–ಹೋರಾಟ ಎಲ್ಲ ಭಾರತೀಯರಿಗೆ ಸದಾ ಸ್ಫೂರ್ತಿ

* ಸಹೋದರತ್ವ ಎಂಬುದು ಪ್ರತಿ ಭಾರತೀಯನ ರಕ್ತದಲ್ಲಿಯೇ ಇದೆ. ಇದು ಕೋವಿಡ್‌ ಪಿಡುಗಿನ ಸಂದರ್ಭದಲ್ಲಿ ಸಾಬೀತಾಗಿದೆ

andolanait

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

11 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

17 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

22 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

26 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

30 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

36 mins ago