ಬೆಂಗಳೂರು : ನಟ ದರ್ಶನ ಪರ ನಿಂತವರಿಗೂ ಇದೀಗ ಸಂಕಷ್ಟ ಎದುರಾಗಿದೆ. ಇವತ್ತಿನವರೆಗೆ ಒಂದು ಲೆಕ್ಕಾ ಆದರೆ ನಾಳೆಯಿಂದ ಇನ್ನೊಂದು ಲೆಕ್ಕ.
ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ ಬಾಯಿಗೆ ಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯಿ ಹರಿಬಿಡುತ್ತಿರುವವರ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.
ಹೌದು, ದರ್ಶನ್ ಬಂಧನದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ದಿನೇ ದಿನೇ ಹೆಚ್ಚಾಗುತ್ತಿದೆ.
ದರ್ಶನ್ ಅಭಿಮಾನಿ ಹೆಸರಿನಲ್ಲಿ ಬೆದರಿಕೆ ಹಾಕುವುದು ಅಥವ ಬಾಯಿಗೆ ಬಂದಂತೆ ಮಾತನಾಡುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ಪೊಲೀಸ್ ಪಡೆ ಮುಂದಾಗಿದೆ.
ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯಿಗೆ ಬಂದಂತೆ ಪೋಸ್ಟ್ ಅಥವ ವಿಡಿಯೋ ಮಾಡುವವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲ ಖಾಕಿ ಪಡೆ ಸಿದ್ಧತೆ ನಡೆಸಿದೆ.
ಅಷ್ಟೇ ಅಲ್ಲದೆ, ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಅಭಿಮಾನಿ ಹೆಸರಿನಲ್ಲಿ ಮಾಧ್ಯಮ ಹಾಗೂ ಪೊಲೀಸರ ವಿರುದ್ಧ ನಾಲಿಗೆ ಹರಿಬಿಟ್ಟವರಿಗೂ ಸಂಕಷ್ಟ ಎದುರಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಕೆಲವರ ಪಟ್ಟಿ ತಯಾರಾಗಿದ್ದು, ನಾಳೆಯಿಂದ ಸಂಬಂಧಪಟ್ಟ ಎಲ್ಲರನ್ನೂ ಠಾಣೆಗೆ ಕರೆಸಿ ಎಚ್ಚರಿಕೆ ನೀಡುವ ಹಾಗೂ ಕ್ರಮ ಕೈಗೊಳ್ಳುವ ಎಲ್ಲಾ ತಯಾರಿಯನ್ನು ಖಾಕಿ ಪಡೆ ತಿಳಿಸಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…