BREAKING NEWS

ಪದವಿ ವ್ಯಾಸಾಂಗ ಮಗಿಯುತ್ತಿದ್ದಂತೆ ಒಂದು ವರ್ಷ ರಾಜಕೀಯ ತರಬೇತಿ ನೀಡಲು ಚಿಂತನೆ : ಸ್ಪೀಕರ್ ಯುಟಿ ಖಾದರ್

ಬೆಂಗಳೂರು : ರಾಜಕೀಯ ಸೇರಲು ಯಾವುದೇ ಕಾಲೇಜು ಇಲ್ಲ. ಪದವಿ ವ್ಯಾಸಾಂಗ ಮಗಿಯುತ್ತಿದ್ದಂತೆ ಒಂದು ವರ್ಷ ತರಬೇತಿ ನೀಡಬೇಕು. ಇದರಿಂದ ಯುವ ಸಮೂಹಕ್ಕೆ ರಾಜಕೀಯದ ಬಗ್ಗೆ ತಿಳಿದುಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು.

ನೂತನ ಶಾಸಕರಿಗೆ ಹಮ್ಮಿಕೊಂಡಿರುವ ತರಬೇತಿ ಶಿಬಿರದಲ್ಲಿ ಯುಟಿ ಖಾದರ್ ಮಾತನಾಡುತ್ತಾ, ನನಗೂ ಮೊದಲು ಸದನದ ನಡುವಳಿಕೆ ಬಗ್ಗೆ ಗೊತ್ತಿರಲಿಲ್ಲ. ಈ ವೇಳೆ ಧೃವನಾರಯಣ ಅವರ ಬಳಿ ಕೇಳಿ‌ ಕಲಿಯುತ್ತಿದ್ದೆ ಎಂದರು. ಮೊದಲ ಬಾರಿಗೆ ಶಾಸಕರಾಗಿರುವವರಿಗೆ ಪ್ರತಿಯೊಬ್ಬರ ನಡುವೆ ಸಹಕಾರ ಬೆಳೆಯಬೇಕು. ಆಗ ಮಾತ್ರ ಸದನದಲ್ಲಿ ಧೈರ್ಯದಿಂದ ಭಾಗವಹಿಸಲು ಸಾಧ್ಯ. ರಾಜಕೀಯದಲ್ಲಿ ಪ್ರತಿಕ್ರಿಯೆ ಹೆಚ್ಚಿರುತ್ತದೆ. ಈ ವೇಳೆ ತಾಳ್ಮೆ ಬಹಳ ಅಗತ್ಯ. ಸಿಕ್ಕ ಅವಕಾಶ ಉಪಯೋಗಿಸಿಕೊಂಡು, ಜನರ ಮನಸ್ಸಿನಲ್ಲಿ ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡಿ. ಶಾಸಕರ ಒಗ್ಗಟ್ಟು ರಾಜ್ಯದ ಶಕ್ತಿ. ಅಭಿಪ್ರಾಯ ಬೇಧದ ಹೊರತಾಗಿ, ಒಗ್ಗಟ್ಟು ಇರಬೇಕು. ಈ ಮೂಲಕ ಸಾಮರಸ್ಯ ಸಮಾಜ ನಿರ್ಮಾಣ ‌ಮಾಡಬೇಕಿದೆ ಎಂದು ತಿಳಿಸಿದರು.

ರಾಜಕೀಯದಲ್ಲಿ ಯಾವುದೇ ಕಾರ್ಯಕ್ರಮ ಮಾಡುವಾಗ ಟೀಕೆ ಟಿಪ್ಪಣಿಗಳು ವ್ಯಕ್ತವಾಗುವುದು ಸಹಜ. ಇದು ಪ್ರಜಾಪ್ರಭುತ್ವದ ಸೌಂದರ್ಯವೂ ಹೌದು. ಸಿದ್ಧಾಂತ ಯಾವುದೇ ಇರಲಿ, ಎಲ್ಲರನ್ನೂ ಕೈಜೋಡಿಸುವಂತೆ ಮಾಡುವುದು ನನ್ನ ಕೆಲಸ ಎಂದು ಹೇಳುತ್ತಾ, ರವಿಶಂಕರ್ ಗುರೂಜಿ, ಗುರುರಾಜ ಕರ್ಜಗಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರಗತಿಪರರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago