BREAKING NEWS

ರಾಜ್ಯದ ೯೮ ನಗರಗಳಲ್ಲಿ ಮೂರ ದಿನಗಳು ವಿದ್ಯುತ್‌ ಆನ್‌ಲೈನ್‌ ಸೇವೆ ವ್ಯತ್ಯಯ: ಯಾಕೆ ಗೊತ್ತಾ?

ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್‌ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್‌ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ.

ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ ೧೨ರಿಂದ ನವೆಂಬರ್‌ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್‌ಲೈನ್‌ ಸೇವೆಗಳು ಬಂದ್‌ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್‌ಗಳನ್ನು ಒಂದೇ ಸೂರಿನಡಿ ಆನ್‌ಲೈನ್‌ ಪಾವತಿ ಸೇವೆ ಕಲ್ಪಿಸಲು ಆರ್‌-ಎಪಿಡಿಆರ್‌ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್‌ಗಳ ಡಾಟಾವನ್ನು ನೂತನ ಪೋರ್ಟಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್‌ ಸೇವೆ ಬಂದ್‌ ಆಗಲಿದ್ದು, ವಿದ್ಯುತ್‌ ಬಿಲ್‌ ಪಾವತಿ, ಆನ್‌ಲೈನ್‌ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ.

ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್‌ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್‌ಲೈನ್‌ ಸೇವೆಗಳಾದ ಹೊಸ ವಿದ್ಯುತ್‌ ಸಂಪರ್ಕ, ಹೆಸರು/ ಲೋಡ್‌ ಬದಲಾವಣೆ, ನಗದು ಪಾವತಿ, ಬಿಲ್‌ ಪಾವತಿ ಸೇವೆಗಳು ಇರುವುದಿಲ್ಲ. ಆದರೆ ಈ ಅವಧಿಯಲ್ಲಿ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ನಗರಳಲ್ಲಿ ಸೇವೆ ಸ್ಥಗಿತ :

ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.

ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಸೆಸ್ಕ್‌: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.‌ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.

ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್‌, ಭಾಲ್ಕಿ, ಶಹಬಾದ್‌, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್‌, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ.

andolanait

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

3 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

19 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

36 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

49 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago