BREAKING NEWS

ರಾಜ್ಯದ ೯೮ ನಗರಗಳಲ್ಲಿ ಮೂರ ದಿನಗಳು ವಿದ್ಯುತ್‌ ಆನ್‌ಲೈನ್‌ ಸೇವೆ ವ್ಯತ್ಯಯ: ಯಾಕೆ ಗೊತ್ತಾ?

ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್‌ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್‌ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ.

ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ ೧೨ರಿಂದ ನವೆಂಬರ್‌ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್‌ಲೈನ್‌ ಸೇವೆಗಳು ಬಂದ್‌ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್‌ಗಳನ್ನು ಒಂದೇ ಸೂರಿನಡಿ ಆನ್‌ಲೈನ್‌ ಪಾವತಿ ಸೇವೆ ಕಲ್ಪಿಸಲು ಆರ್‌-ಎಪಿಡಿಆರ್‌ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್‌ಗಳ ಡಾಟಾವನ್ನು ನೂತನ ಪೋರ್ಟಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್‌ ಸೇವೆ ಬಂದ್‌ ಆಗಲಿದ್ದು, ವಿದ್ಯುತ್‌ ಬಿಲ್‌ ಪಾವತಿ, ಆನ್‌ಲೈನ್‌ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ.

ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್‌ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್‌ಲೈನ್‌ ಸೇವೆಗಳಾದ ಹೊಸ ವಿದ್ಯುತ್‌ ಸಂಪರ್ಕ, ಹೆಸರು/ ಲೋಡ್‌ ಬದಲಾವಣೆ, ನಗದು ಪಾವತಿ, ಬಿಲ್‌ ಪಾವತಿ ಸೇವೆಗಳು ಇರುವುದಿಲ್ಲ. ಆದರೆ ಈ ಅವಧಿಯಲ್ಲಿ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ನಗರಳಲ್ಲಿ ಸೇವೆ ಸ್ಥಗಿತ :

ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.

ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಸೆಸ್ಕ್‌: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.‌ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.

ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್‌, ಭಾಲ್ಕಿ, ಶಹಬಾದ್‌, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್‌, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

17 hours ago