BREAKING NEWS

ರಾಜ್ಯದ ೯೮ ನಗರಗಳಲ್ಲಿ ಮೂರ ದಿನಗಳು ವಿದ್ಯುತ್‌ ಆನ್‌ಲೈನ್‌ ಸೇವೆ ವ್ಯತ್ಯಯ: ಯಾಕೆ ಗೊತ್ತಾ?

ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್‌ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್‌ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ.

ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ ೧೨ರಿಂದ ನವೆಂಬರ್‌ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್‌ಲೈನ್‌ ಸೇವೆಗಳು ಬಂದ್‌ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್‌ಗಳನ್ನು ಒಂದೇ ಸೂರಿನಡಿ ಆನ್‌ಲೈನ್‌ ಪಾವತಿ ಸೇವೆ ಕಲ್ಪಿಸಲು ಆರ್‌-ಎಪಿಡಿಆರ್‌ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್‌ಗಳ ಡಾಟಾವನ್ನು ನೂತನ ಪೋರ್ಟಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್‌ ಸೇವೆ ಬಂದ್‌ ಆಗಲಿದ್ದು, ವಿದ್ಯುತ್‌ ಬಿಲ್‌ ಪಾವತಿ, ಆನ್‌ಲೈನ್‌ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ.

ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್‌ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್‌ಲೈನ್‌ ಸೇವೆಗಳಾದ ಹೊಸ ವಿದ್ಯುತ್‌ ಸಂಪರ್ಕ, ಹೆಸರು/ ಲೋಡ್‌ ಬದಲಾವಣೆ, ನಗದು ಪಾವತಿ, ಬಿಲ್‌ ಪಾವತಿ ಸೇವೆಗಳು ಇರುವುದಿಲ್ಲ. ಆದರೆ ಈ ಅವಧಿಯಲ್ಲಿ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ನಗರಳಲ್ಲಿ ಸೇವೆ ಸ್ಥಗಿತ :

ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.

ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಸೆಸ್ಕ್‌: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.‌ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.

ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್‌, ಭಾಲ್ಕಿ, ಶಹಬಾದ್‌, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್‌, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

16 hours ago